ಸಹಾಯ ಮಾಡುವವರ ಸಂಖ್ಯೆ ಹೆಚ್ಚಾಗಲಿ: ಹರ್ಷಾನಂದ ಗುತ್ತೇದಾರ

0
71

ಕಲಬುರಗಿ: ದೇಶದಲ್ಲಿ ಸಧ್ಯ ವಿಷಮ ಪರಿಸ್ಥಿತಿ ಇದ್ದು ಅದರ ನಿವಾರಣೆಗಾಗಿ ಎಲ್ಲರೂ ಸಹಾಯ ಮಾಡಬೇಕಾಗಿದೆ ಅದೇ ರೀತಿ ಸಹಾಯ ಮಾಡುವವರ ಸಂಖ್ಯೆಯೂ ಹೆಚ್ಚಾಗಲಿ ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಹೇಳಿದರು.

ಮಂಗಳವಾರ ಆಳಂದ ಪಟ್ಟಣದಲ್ಲಿ ಮತ್ತು ಖಜೂರಿ ಬಾರ್ಡರ್‌ನಲ್ಲಿ ಆಳಂದ ಮಂಡಲ ಬಿಜೆಪಿ ವತಿಯಿಂದ ಬಡವರಿಗೆ, ನಿರ್ಗತಿಕರಿಗೆ, ಪೌರ ಕಾರ್ಮಿಕರಿಗೆ ಹಾಗೂ ಪೊಲೀಸ್ ಇಲಾಖೆಯವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸಿದರು.

Contact Your\'s Advertisement; 9902492681

ಕೊರೋನಾ ವೈರಸ್‌ನಿಂದ ಹಲವಾರು ಜನ ಕೆಲಸವಿಲ್ಲದೇ ಕಂಗಾಲಾಗಿದ್ದಾರೆ ಅವರಿಗೆ ಒಪ್ಪತ್ತಿನ ಊಟಕ್ಕೂ ಪರದಾಟುವಂತಹ ಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಅವರ ಸಹಾಯಕ್ಕೆ ಧಾವಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಸಾದ್ಯವಾದಷ್ಟು ಈ ಸಂದರ್ಭದಲ್ಲಿ ಅವರ ಜೊತಗೆ ನಿಲ್ಲೋಣಾ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಕಾರ್ಯಕರ್ತರು ತಮ್ಮ ಇತಿಮಿತಿಯಲ್ಲಿ ಪ್ರಧಾನಮಂತ್ರಿಗಳ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಲು ಹಾಗೂ ದಿನಬಳಕೆಯ ವಸ್ತುಗಳನ್ನು ದಾನ ಮಾಡುವವರು ಸಂಬಂಧಪಟ್ಟ ತಹಸೀಲ ಕಚೇರಿಯಲ್ಲಿ ಹೆಸರು ನೋಂದಾಯಿಸಿ ತಮ್ಮ ಕೈಲಾದ ಸಹಾಯ ಮಾಡಬೇಕೆಂದು ಹೇಳಿದರು.

ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಪ್ರಕಾಶ ಮಾನೆ, ಮಹೇಶ ಗೌಳಿ, ರವಿ ಪಾಟೀಲ, ರೋಹಿತ ಬಂಡಗಾರ, ಮಹಾಂತೇಶ ಪೂಜಾರಿ, ಗಣೇಶ ಭೋಸಲೆ, ಓಂಕಾರ ಕಾಂಬಳೆ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here