ಬೀಸಾಕಲ್ಲು ಮಾಡುವ ಭೋವಿ ಕುಟುಂಬಗಳಿಗೆ ಆಹಾರ ಪದಾರ್ಥ ವಿತರಣೆ

0
76

ಶಹಾಬಾದ: ನಗರದ ಹಳೆ ಪೊಲೀಸ್ ಠಾಣೆಯ ಪಕ್ಕದಲ್ಲಿ ಊಟದ ಸಮಸ್ಯೆಯಿಂದ ಪರದಾಡುತ್ತಿದ್ದ ಬೀಜಾಪೂರದಿಂದ ಬಂದು ಬೀಸಾಕಲ್ಲು ಮಾಡುವ ಭೋವಿ ಕುಟುಂಬಗಳಿಗೆ ಬಿಜೆಪಿ ಮುಖಂಡ ಗಿರಿರಾಜ ಪವಾರ ಹಾಗೂ ಸಂಗಡಿಗರು ಆಹಾರದ ಪದಾರ್ಥಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಗಿರಿರಾಜ ಪವಾರ ಮಾತನಾಡಿದ ಅವರು, ಕರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ.ಕೆಲಸಕ್ಕಾಗಿ ದೂರದಿಂದ ಬಂದ ಜನರಿಗೆ ದುಡಿಯಲು ಕೆಲಸವಿಲ್ಲ. ಬಿಸಾಕಲ್ಲು ನಿರ್ಮಾಣ ಮಾಡಿದರೂ ಕೊಳ್ಳೊರಿಲ್ಲ.ಇದರಿಂದ ವ್ಯಾಪಾರವಿಲ್ಲದೇ ಕಷ್ಟದ ಬದುಕು ನಿರ್ಮಾಣವಾಗಿದೆ. ಅಲ್ಪಸ್ವಲ್ಪ ಇದ್ದ ದುಡ್ಡು ಖಾಲಿಯಾಗಿದೆ.

Contact Your\'s Advertisement; 9902492681

ಇಂತಹ ಅನೇಕ ಕುಟುಂಬಗಳಿಗೆ ಆಹಾರ ತಯ್ಯಾರು ಮಾಡಿ ನೀಡಿದರೇ ಒಂದು ದಿನದ ಮಟ್ಟಿಗೆ ಆಗಬಹುದು.ಅದರ ಬದಲಿಗೆ ಇದ್ದವರು ಸ್ವಲ್ಪ ಆಹಾರ ಪದಾರ್ಥಗಳನ್ನು ನೀಡಿದರೇ ಅವರೇ ಆಹಾರವನ್ನು ಮಾಡಿಕೊಂಡು ಊಟ ಮಾಡುತ್ತಾರೆ. ಈ ಸಂದರ್ಭದಲ್ಲಿ ಕೇವಲ ಪಟ್ಟಣ ಪ್ರದೇಶದಲ್ಲಿ ಕೊಡುವುದಕ್ಕಿಂತ ಗ್ರಾಮೀಣ ಪ್ರದೇಶದ ಬಡ ರೈತರಿಗೂ ದಾಸೋಹ ಮಾಡುವ ಕೈಗಳು ಹೆಚ್ಚಾದರೆ, ಅನ್ನದಾತನಿಗೆ ಸ್ವಲ್ಪ ಋಣ ತೀರಿಸಿದಂತಾಗುತ್ತದೆ.ಆದ್ದರಿಂದ ದಾಸೋಹ ಮಾಡುವ ಜನರು ಹೆಚ್ಚಾಗಲಿ ಎಂದು ಮನವಿ ಮಾಡುತ್ತೆನೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here