ಬಿಸಿ ಬಿಸಿ ಸುದ್ದಿ

ಬೀಸಾಕಲ್ಲು ಮಾಡುವ ಭೋವಿ ಕುಟುಂಬಗಳಿಗೆ ಆಹಾರ ಪದಾರ್ಥ ವಿತರಣೆ

ಶಹಾಬಾದ: ನಗರದ ಹಳೆ ಪೊಲೀಸ್ ಠಾಣೆಯ ಪಕ್ಕದಲ್ಲಿ ಊಟದ ಸಮಸ್ಯೆಯಿಂದ ಪರದಾಡುತ್ತಿದ್ದ ಬೀಜಾಪೂರದಿಂದ ಬಂದು ಬೀಸಾಕಲ್ಲು ಮಾಡುವ ಭೋವಿ ಕುಟುಂಬಗಳಿಗೆ ಬಿಜೆಪಿ ಮುಖಂಡ ಗಿರಿರಾಜ ಪವಾರ ಹಾಗೂ ಸಂಗಡಿಗರು ಆಹಾರದ ಪದಾರ್ಥಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಗಿರಿರಾಜ ಪವಾರ ಮಾತನಾಡಿದ ಅವರು, ಕರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ.ಕೆಲಸಕ್ಕಾಗಿ ದೂರದಿಂದ ಬಂದ ಜನರಿಗೆ ದುಡಿಯಲು ಕೆಲಸವಿಲ್ಲ. ಬಿಸಾಕಲ್ಲು ನಿರ್ಮಾಣ ಮಾಡಿದರೂ ಕೊಳ್ಳೊರಿಲ್ಲ.ಇದರಿಂದ ವ್ಯಾಪಾರವಿಲ್ಲದೇ ಕಷ್ಟದ ಬದುಕು ನಿರ್ಮಾಣವಾಗಿದೆ. ಅಲ್ಪಸ್ವಲ್ಪ ಇದ್ದ ದುಡ್ಡು ಖಾಲಿಯಾಗಿದೆ.

ಇಂತಹ ಅನೇಕ ಕುಟುಂಬಗಳಿಗೆ ಆಹಾರ ತಯ್ಯಾರು ಮಾಡಿ ನೀಡಿದರೇ ಒಂದು ದಿನದ ಮಟ್ಟಿಗೆ ಆಗಬಹುದು.ಅದರ ಬದಲಿಗೆ ಇದ್ದವರು ಸ್ವಲ್ಪ ಆಹಾರ ಪದಾರ್ಥಗಳನ್ನು ನೀಡಿದರೇ ಅವರೇ ಆಹಾರವನ್ನು ಮಾಡಿಕೊಂಡು ಊಟ ಮಾಡುತ್ತಾರೆ. ಈ ಸಂದರ್ಭದಲ್ಲಿ ಕೇವಲ ಪಟ್ಟಣ ಪ್ರದೇಶದಲ್ಲಿ ಕೊಡುವುದಕ್ಕಿಂತ ಗ್ರಾಮೀಣ ಪ್ರದೇಶದ ಬಡ ರೈತರಿಗೂ ದಾಸೋಹ ಮಾಡುವ ಕೈಗಳು ಹೆಚ್ಚಾದರೆ, ಅನ್ನದಾತನಿಗೆ ಸ್ವಲ್ಪ ಋಣ ತೀರಿಸಿದಂತಾಗುತ್ತದೆ.ಆದ್ದರಿಂದ ದಾಸೋಹ ಮಾಡುವ ಜನರು ಹೆಚ್ಚಾಗಲಿ ಎಂದು ಮನವಿ ಮಾಡುತ್ತೆನೆ ಎಂದರು.

emedialine

Recent Posts

ಸುಭಾಷ್ ರಾಠೋಡ್ ಜಗದೇವ್ ಗುತ್ತೇದಾರಿಂದ ಡಾ. ಮಲ್ಲಿಕಾರ್ಜುನ ಖರ್ಗೆಗೆ ಸನ್ಮಾನ

ನವದೆಹಲಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಕಾಳಗಿ ರವರು ಎಐಸಿಸಿ ಅಧ್ಯಕ್ಷರು…

3 hours ago

ಡಾ.ಶರಣಬಸಪ್ಪ ಕ್ಯಾತನಾಳಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…

13 hours ago

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

14 hours ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

15 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

16 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

16 hours ago