ಕಲಬುರಗಿ: ಕೊರೋನಾ ವೈರಸ್ ನಿಯಂತ್ರಣ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕರ್ಫ್ಯೂ ಜಾರಿಯಲ್ಲಿರುವುದರಿಂದ ಬಿಡಾಡಿ ಹಾಗೂ ಇತರೆ ದನಗಳು, ನಾಯಿ, ಹಂದಿ, ಪಕ್ಷಿಗಳಿಗೆ ನೀರು ಮತ್ತು ಆಹಾರಕ್ಕೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತಲಿನ ಇಂತಹ ಪ್ರಾಣಿ-ಪಕ್ಷಿಗಳಿಗೆ ಮಾನವೀಯತೆಯಿಂದ ಅವುಗಳಿಗೂ ನೀರು, ಆಹಾರ ನೀಡುವತ್ತ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯ ಹುಣಚಿರಾಯ ಎಸ್. ಮೋಟಗಿ ಅವರು ಮನವಿ ಮಾಡಿದ್ದಾರೆ.
ಖಾನಾವಳಿ, ರೆಸ್ಟೋರೆಂಟ್, ಕಲ್ಯಾಣ ಮಂಟಪ, ಬೇಕರಿ, ಮುಸುರಿ ಚೆಲ್ಲುವ ಇನ್ನಿತರೆ ಸ್ಥಳಗಳಿಂದ ಆಹಾರವನ್ನು ತೆಗದುಕೊಳ್ಳುವ ಈ ಪ್ರಾಣಿ-ಪಕ್ಷಿಗಳಿಗೆ ಹೋಟೆಲ್-ರೆಸ್ಟೋರೆಂಟ್ ಬಂದ್ನಿಂದ ಆಹಾರದ ಸಮಸ್ಯೆ ಎದುರಿಸುತ್ತಿವೆ. ಮೂಕ ಪ್ರಾಣಿಗಳ ರೋಧನೆ ಅರಿತು ಆಹಾರ ವ್ಯವಸ್ಥೆ ಮಾಡುವ ಮೂಲಕ ಕಾಳಜಿ ಹಾಗೂ ದಯೆ ತೋರುವುದು ಇದೀಗ ಅತೀ ಅವಶ್ಯಕವಾಗಿದೆ.
ಈ ಕುರಿತು ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಶು ಸಂಗೋಪನಾ ಅಧಿಕಾರಿಗಳಿಗೆ ಪತ್ರ ಬರೆದು ಪ್ರಾಣಿ ಮತ್ತು ಪಕ್ಷಿಗಳಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಬೇಕೆಂದು ಕೋರಿದ್ದೇನೆ. ಕಲಬುರಗಿ ನಗರದ ನಂದಿ ಎನಿಮಲ್ ವೆಲ್ಫೇರ್ ಸಂಸ್ಥೆಯಿಂದ ಪ್ರಾಣಿ ಹಾಗೂ ಪಕ್ಷಿಗಳಿಗೆ ನೀರಿನ ತೊಟ್ಟಿ ಇಟ್ಟು ನೀರು ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿರುತ್ತದೆ. ಕಲಬುರಗಿ ನಗರ ಮತ್ತು ಗ್ರಾಮೀಣ ಭಾಗದ ಸಾರ್ವಜನಿಕರು ಇದೇ ರೀತಿಯಲ್ಲಿ ಪ್ರಾಣಿ, ಪಕ್ಷಿಗಳಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಬೇಕೆಂದು ಕೋರಿರುವ ಅವರು ಸಾರ್ವಜನಿಕರು ತಮ್ಮ ಮನೆಯಲ್ಲಿ ಉಳಿಯಬೇಕು ಹಾಗೂ ಮನೆಯ ಸುತ್ತಮುತ್ತಲಿನ ಪ್ರಾಣಿ-ಪಕ್ಷಿಗಳಿಗೆ ಆಹಾರ ನೀಡಬೇಕು ಎಂದರು.
ನಾಡಿನ ಎಲ್ಲ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಮಠ-ಮಂದಿರಗಳು ತಮ್ಮ ಮನೆಯ ಸುತ್ತಮುತ್ತಲೂ ಇರುವ ಪ್ರಾಣಿ-ಪಕ್ಷಿಗಳಿಗೆ ಆಹಾರ ಮತ್ತು ನೀರು ಒದಗಿಸುವ ಕಾರ್ಯ ಮಾಡಬೇಕೆಂದು ಅವರು ಮನವಿ ಮಾಡಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…