ಕೊವಿಡ್-೧೯ರ ವಿರುದ್ಧ ಭಾರತದ ಸಮರವನ್ನು ಕೋಮುಗ್ರಸ್ತಗೊಳಿಸುವುದನ್ನು ನಿಲ್ಲಿಸಿ: ಸಿಪಿಐ(ಎಂ) ಪೊಲಿಟ್‌ಬ್ಯುರೊ

ನವದೆಹಲಿ: ದಿಲ್ಲಿಯಲ್ಲಿ ತಬ್ಲೀಘಿ ಜಮಾತ್‌ನ ಒಂದು ಸಭೆಯಲ್ಲಿ ಹಾಜರಿದ್ದ ಬಹಳಷ್ಟು ಜನಗಳು ದೇಶದ ವಿವಿಧ ಭಾಗಗಳಿಗೆ ಹೋಗಿದ್ದು ಅವರಲ್ಲಿ ಹಲವರಿಗೆ ಕೊರೊನ ಸೋಂಕು ತಗಲಿದೆ ಎಂದು ಪತ್ತೆಯಾಗಿರುವುದು ಒಂದು ಗಂಭೀರ ಆತಂಕದ ಸಂಗತಿ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಮಾರ್ಚ್ ಮಧ್ಯಭಾಗದಲ್ಲಿ ಸಭೆ-ಸಮಾರಂಭಗಳ ಸಂಖ್ಯೆಯ ಮೇಲೆ ನಿರ್ಬಂಧಗಳಿದ್ದಾಗ ಇಂತಹ ಒಂದು ಸಭೆಯನ್ನು ನಡೆಸುವುದು ಜಮಾತ್ ಮುಖಂಡತ್ವದ ಬೇಜವಾಬ್ದಾರಿತನ. ಆದರೆ ಮಾರ್ಚ್ ೨೦-೨೧ ರಂದು ಮತ್ತೊಂದು ಸಮಾರಂಭಕ್ಕೆ ಅಧಿಕಾರಿಗಳು ಅವಕಾಶ ಹೇಗೆ ನೀಡಿದರು ಎಂಬುದು ಅರ್ಥವಾಗದ ಸಂಗತಿ ಎಂದು ಪೊಲಿಟ್ ಬ್ಯುರೊ ಟಿಪ್ಪಣಿ ಮಾಡಿದೆ.

ಇದಕ್ಕೆ ಒಂದು ಕೋಮುವಾದಿ ಬಣ್ಣ ಕೊಡಲು ಮತ್ತು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುವ ಪ್ರಯತ್ನಗಳನ್ನು, ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಪ್ರಚಾರವನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡಿಸಿದೆ. ಕೊರೊನ ವೈರಸ್ ಧರ್ಮದ ಆಧಾರದಲ್ಲಿ ಭೇದ ಮಾಡುವುದಿಲ್ಲ. ಈ ಪ್ರಶ್ನೆಯನ್ನು ಕೋಮುಗ್ರಸ್ತಗೊಳಿಸುವ ಎಲ್ಲ ಪ್ರಯತ್ನಗಳಿಗೆ ತಕ್ಕ ಪ್ರತ್ಯುತ್ತರ ನೀಡಬೇಕು. ಮಾರ್ಚ್ ೧೩ ರಂದು ೨೦೦ಕ್ಕಿಂತ ಹೆಚ್ಚು ಜನಗಳಿರುವ ಸಾಮಾಜಿಕ, ಧಾರ್ಮಿಕ, ರಾಜಕೀಯ ಸಭೆ ಸಮಾರಂಭಗಳನ್ನು ನಿಷೇಧಿಸಿದ ನಂತರ ದೇಶದ ಹಲವು ಭಾಗಗಳಲ್ಲಿ ನಡೆದಿರುವ ಎಲ್ಲ ದೊಡ್ಡ ಸಮಾರಂಭಗಳ ಆಮೂಲಾಗ್ರ ತನಿಖೆ ನಡೆಸಬೇಕು. ಅವುಗಳಲ್ಲಿ ಭಾಗವಹಿಸಿದವರನ್ನು ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಬೇಕು. ದಕ್ಷಿಣ ಕೊರಿಯ ಮತ್ತು ಸಿಂಗಾಪುರದಲ್ಲಿ ದೊಡ್ಡ ಗೋಷ್ಠಿಗಳಲ್ಲಿ ಭಾಗವಹಿಸಿದ ಎಲ್ಲರನ್ನೂ ಅತ್ಯಂತ ಜಾಗರೂಕತೆಯಿಂದ ಪತ್ತೆ ಹಚ್ಚಿ, ತೀವ್ರ ತಪಾಸಣೆಯ ನಂತರ ಅವರನ್ನು ಪ್ರತ್ಯೇಕಗೊಳಿಸಿ ಕೋವಿಡ್-೧೯ರ ಸಾಮುದಾಯಿಕ ಪ್ರಸರಣ  ನಡೆಯದಂತೆ ತಡೆದಿವೆ. ಅದರಿಂದ ನಾವು ಪಾಟ ಕಲಿಯಬೇಕು ಎಂದು ಪೊಲಿಟ್‌ಬ್ಯುರೊ ಹೇಳಿದೆ. ಭಾರತದ ತಪಾಸಣಾ ದರ ತುಂಬಾ ಕಳಗಿದೆ, ದಕ್ಷಿಣ ಕೊರಿಯಾದ್ದು ನಮ್ಮ ದರದ ೨೪೧ ಪಟ್ಟು. ಇದನ್ನು ತುರ್ತಾಗಿ ಸರಿಪಡಿಸಬೇಕು ಎಂದೂ ಅದು ಹೇಳಿದೆ.

ಇದು ಕೋವಿಡ್-೧೯ರ ವಿರುದ್ಧ ಭಾರತದ ಸಮರ. ಇದನ್ನು ಕೋಮುಗ್ರಸ್ತಗೊಳಿಸುವ ಎಲ್ಲ ಪ್ರಯತ್ನಗಳೂ ಈ ವೈರಸ್ಸನ್ನು ತಡೆಗಟ್ಟುವಲ್ಲಿ ನಮ್ಮ ವಿಜಯವನ್ನು ಶಿಥಿಲಗೊಳಿಸುತ್ತವೆ. ಇದು ನಮ್ಮನ್ನು ನಾವೇ ಸೋಲಿಸುವ ಒಂದು ಕೆಲಸವಾಗುತ್ತದೆ. ಸರಕಾರ ಇಂತಹ ಅಪಾಯಕಾರೀ ಕೋಮುವಾದಿ ಧ್ರುವೀಕರಣ ಹರಡುವುದನ್ನು ನಿಲ್ಲಿಸಲು ಸರ್ವ ಪ್ರಯತ್ನಗಳನ್ನು ನಡೆಸಬೇಕು ಎಂದು ಪೊಲಿಟ್ ಬ್ಯುರೊ ಆಗ್ರಹಿಸಿದೆ.

ಪ್ರಚೋದನೆಗಳಿಗೆ ಬಲಿ ಬೀಳಬಾರದು, ಈ ಮಹಾಮಾರಿಯ ವಿರುದ್ದ ನಮ್ಮ ಐಕ್ಯ ಪ್ರಯತ್ನಗಳನ್ನು ಬಲಪಡಿಸಬೇಕು ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಎಲ್ಲರಿಗೂ ಮನವಿ ಮಾಡಿದೆ.

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

59 mins ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420