ಕೊರೋನಾ ವಿರುದ್ಧ ಜ್ಯೋತಿ ಬೆಳಗಿಸಿ: ಪ್ರಧಾನಿ ಕರೆಗೆ ಎಸ್‌ಯುಸಿಐ ಅಪಹಾಸ್ಯ

ಕಲಬುರಗಿ: ಮಹಾಮಾರಿ ಕೊರೋನಾ ಸೋಂಕು ತಡೆಗೆ ಏಪ್ರಿಲ್ ೫ರಂದು ರಾತ್ರಿ ೯ ಗಂಟೆಗೆ ಪ್ರತಿ ಮನೆ, ಮನೆಯಲ್ಲಿ ಜ್ಯೋತಿ ಬೆಳಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಕೊಟ್ಟಿದ್ದು ಹಾಸ್ಯಾಸ್ಪದ ಎಂದು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ವಿ. ದಿವಾಕರ್ ಅವರು ಟೀಕಿಸಿದ್ದಾರೆ.

ಕೊರೋನಾ ವೈರಸ್‌ನಿಂದ ಸೋಂಕಿತರ ಮತ್ತು ಮೃತರಾದವರ ಸಂಖ್ಯೆ ದಿನನಿತ್ಯ ಅಪಾಯಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಆದರೆ ಅವಶ್ಯಕ ಪರೀಕ್ಷಾ ಕಿಟ್‌ಗಳು, ಪರೀಕ್ಷಾ ಕೇಂದ್ರಗಳು, ಆಸ್ಪತ್ರೆಗಳಲ್ಲಿ ಅವಶ್ಯಕವಾದ ವೆಂಟಿಲೇಟರ್ ಮತ್ತಿತರ ವೈದ್ಯಕೀಯ ಉಪಕರಣಗಳು, ವೈದ್ಯರಿಗೆ, ನರ್ಸ್‌ಗಳಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬೇಕಾದ ಸುರಕ್ಷಾ ಸಾಧನಗಳ ಕೊರತೆಯು ಬಯಲಾಗುತ್ತಲೇ ಇದೆ ಎಂದು ಅವರು ಹೇಳಿಕೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಮೊದಲೇ ಹಸಿವೆಯಿಂದ ಪ್ರತಿನಿತ್ಯ ಬಡವರು ಜೀವ ಕಳೆದುಕೊಳ್ಳುವ ನಮ್ಮ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಕಾರಣದಿಂದಾಗಿ ಅದು ಇನ್ನ? ಉಲ್ಬಣಗೊಂಡು ಕೋಟಿಗಟ್ಟಲೆ ಕೆಲಸ ಕಳೆದುಕೊಂಡ  ಕಾರ್ಮಿಕರು, ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು, ರಿಕ್ಷಾ ಚಾಲಕರು, ಬೀದಿ ಬದಿ ವ್ಯಾಪಾರಿಗಳು, ಮನೆಗೆಲಸದವರು ಮುಂತಾದವರು ಹಸಿವೆಯಿಂದ ನರಳುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ  ಏಪ್ರಿಲ್ ೩ ರಂದು  ಸನ್ಮಾನ್ಯ ಪ್ರಧಾನಿಗಳು ಮಹತ್ವವಾದ ಘೋ?ಣೆ ಮಾಡುತ್ತಾರೆ ಎಂದು ದೇಶದ ಜನಸಾಮಾನ್ಯರು ನಿರೀಕ್ಷಿಸಿದ್ದರು. ಆದರೆ ಶ್ರೀಮಾನ್ ಮೋದಿಯವರು ಮಾಡಿರುವುದು ನಿರಾಶಾದಾಯಕ ಮಾತ್ರವಲ್ಲದೆ ಕ್ರೂರ ಹಾಸ್ಯವಾಗಿದೆ. ಏಪ್ರಿಲ್ ೫ರಂದು ರಾತ್ರಿ ೯ ಗಂಟೆಗೆ ೯ ನಿಮಿ?ಗಳ ಕಾಲ ನಮ್ಮ ಮನೆಯ ದೀಪಗಳನ್ನು ಆರಿಸಿ, ಮನೆಯ ಬಾಗಿಲಿಗೆ ಬಂದು ಮೊಂಬತ್ತಿ, ದೀಪ ಅಥವಾ ಟಾರ್ಚುಗಳನ್ನು ಉರಿಸುವಂತೆ ಅವರು ಕರೆ ನೀಡಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ? ಜನರಿಗೆ ಘಂಟೆ ಬಾರಿಸಲು ಹೇಳಿದಂತೆ, ಸರ್ಕಾರದ ಜವಾಬ್ದಾರಿಯಿಂದ ಧಾರ್ಮಿಕ ನಿಗೂಢತೆಯೆಡೆಗೆ, ಸರ್ಕಾರ ಮತ್ತು ಆಳುವ ಪಕ್ಷಕ್ಕೆ ಕುರುಡು ವಿಧೇಯತೆಯೆಡೆಗೆ ಜನರ ಗಮನವನ್ನು ಸೆಳೆಯಲು ಮಾಡಿರುವ ಚತುರ ಕುತಂತ್ರ ಇದಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಜನತೆ ಎಚ್ಚರಿಕೆಯಿಂದ ಇದ್ದು ಗಂಭೀರ ಪರಿಸ್ಥಿತಿಯನ್ನು ಎದುರಿಸಲು ಅವಶ್ಯಕ ಕ್ರಮಗಳನ್ನು ಕೈಗೊಳ್ಳುವುದಕ್ಕಾಗಿ ಸರ್ಕಾರಗಳ ಮೇಲೆ ಒತ್ತಡ ಹೇರಲು ತಮ್ಮ ದನಿ ಎತ್ತಬೇಕೆಂದು ಅವರು ಮನವಿ ಮಾಡಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420