ಕಲಬುರಗಿ: ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್-9ರ ಶಬ್-ಎ-ಬಾರಾತ್ ದಿನದಂದು ಯಾವುದೇ ಮಸೀದಿ, ದರ್ಗಾ ಮತ್ತು ಖಬ್ರಸ್ಥಾನದಲ್ಲಿ ಸಭೆ ಪ್ರಾರ್ಥನೆ (Congregational Prayers) ಮಾಡಬಾರದು ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಸಿ.ಇ.ಓ ಇಸ್ಲಾಯುದ್ದಿನ್ ಜೆ. ಗದ್ಯಾಳ ಅವರು ರಾಜ್ಯದ ಎಲ್ಲಾ ಮಸೀದಿ, ದರ್ಗಾ ಮತ್ತು ಖಬ್ರಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂದ ಆದೇಶ ಹೊರಡಿಸಿರುವ ವಕ್ಪ್ ಮಂಡಳಿಯ ಸಿ.ಇ.ಓ ಅವರು ಅಂದು ಮಸೀದಿ,ದರ್ಗಾ ಮತ್ತು ಮುಸ್ಲಿಂರ ಖಬ್ರಸ್ಥಾನದಲ್ಲಿ ಸಾರ್ವಜನಿಕರು ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ಸಹ ಆಯೋಜಿಸುವಂತಿಲ್ಲ. ಮೇಲಾಗಿ ಅಂದು ದರ್ಗಾ ಮತ್ತು ಖಬ್ರಸ್ಥಾನದ ಎಲ್ಲಾ ಗೇಟುಗಳನ್ನು ಸಹ ಮುಚ್ಚುವಂತೆ ನಿರ್ದೇಶನ ನೀಡಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಡಿಯಿಂದ ಖಬ್ರಸ್ಥಾನ ಮತ್ತು ದರ್ಗಾ ವ್ಯವಸ್ಥಾಪನಾ ಸಮಿತಿಗಳು ತಪ್ಪದೆ ಈ ಸೂಚನೆಗಳನ್ನು ಪಾಲಿಸಬೇಕು. ಇನ್ನೂ ಈ ಆದೇಶ ಕಟ್ಟುನಿಟ್ಟಾಗಿ ಪಾಲನೆ ಮಾಡುವ ಸಂಬಂಧ ಜಿಲ್ಲಾ ವಕ್ಫ್ ಅಧಿಕಾರಿಗಳು ಮತ್ತು ಜಿಲ್ಲಾ ವಕ್ಫ್ ಸಲಹಾ ಸಮಿತಿ ನಿಗಾ ವಹಿಸಬೇಕು.
ಒಂದು ವೇಳೆ ಇದನ್ನು ಉಲ್ಲಂಘಿಸಿದಲ್ಲಿ ಮಂಡಳಿಯು ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಸಿ.ಇ.ಓ ಇಸ್ಲಾಯುದ್ದಿನ್ ಜೆ. ಗದ್ಯಾಳ ಎಚ್ಷರಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…