ಸುರಪುರ: ಕೊರೊನಾ ಭೀತಿಯಿಂದ ಮನೆಯಿಂದ ಹೊರಗೆ ಬರದೆ ಲಾಕ್ಡೌನ್ ಆಚರಿಸುತ್ತಿರುವ ನಗರದಲ್ಲಿನ ಬಡ ಜನತೆಗೆ ಆಗಿರುವ ತೊಂದರೆಯನ್ನು ಅರಿತ ವೀರಶೈವ ಲಿಂಗಾಯತ ಯುವ ವೇದಿಕೆ ಬಡವರ ಮನೆ ಬಾಗಿಲಿಗೆ ಹೋಗಿ ಆಹಾರ ಸಾಮಗ್ರಿಗಳು ಮತ್ತು ಸಾಬೂನು ಪೇಸ್ಟ್ ಮುಂತಾದ ಅಗತ್ಯ ವಸ್ತುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷ ಮಂಜುನಾಥ ಜಾಲಹಳ್ಳಿ ಮಾತನಾಡಿ,ಇಂದು ಲಾಕ್ಡೌನ್ ಜಾರಿಯಿಂದಾಗಿ ಜನರು ಮನೆಯಿಂದ ಹೊರಗೆ ಬರದೆ ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ದಿನ ಕೂಲಿಮಾಡಿ ಜೀವನ ನಡೆಸುವ ಕುಟುಂಬಗಳು ಒಂದೊತ್ತಿನ ಊಟಕ್ಕು ಕಷ್ಟಪಡಬೇಕಾದ ಸ್ಥಿತಿ ಉಂಟಾಗಿದೆ.ಇದನ್ನು ಮನಗಮಡಿರುವ ನಮ್ಮ ವೀರಶೈವ ಲಿಂಗಾಯತ ಯುವ ವೇದಿಕೆಯು ನಗರದಲ್ಲಿ ಬಡ ಕುಟುಂಬಗಳ ಬಳಿಗೆ ಹೋಗಿ ಆಹಾರ ಧಾನ್ಯಗಳನ್ನು ನೀಡುವ ಜೊತೆಗೆ ಏನೆ ಕಷ್ಟವಾದರು ಕೊರೊನಾ ನಿರ್ಮೂಲನೆಯಾಗಬೇಕಾದರೆ ನಿಮ್ಮ ಸಹಕಾರ ಮುಖ್ಯವಾಗಿದೆ. ನೀವು ಮನೆಯಿಂದ ಹೊರಗೆ ಬರದಿದ್ದರೆ ಅದರಿಂದ ನಿಮ್ಮನ್ನು ನೀವು ರಕ್ಷಣೆ ಮಾಡಿಕೊಂಡಂತಾಗಲಿದೆ, ಜೊತೆಗೆ ಬೇರೆಯವರನ್ನು ರಕ್ಷಣೆ ಮಾಡಿದಂತಾಗಲಿದೆ.ಆದ್ದರಿಂದ ನೀವು ಮನೆಯಿಂದ ಹೊರಗೆ ಬರದೆ ಮನೆಯಲ್ಲಿದ್ದು ಲಾಕ್ಡೌನ್ಗೆ ಬೆಂಬಲಿಸಿ.ನಿಮಗೆ ಬೇಕಾದ ಅಗತ್ಯ ವಸ್ತುಗಳನ್ನು ನಿಮ್ಮ ಮನೆಗೆ ತಂದು ಕೊಡುವುದಾಗಿ ತಿಳಿಸಿ ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಿದರು.
ನಗರದ ಕಬಾಡಗೇರಾದಲ್ಲಿನ ಹಾಗು ತಾಲೂಕಿನ ತಳವಾರಗೇರಾದಲ್ಲಿನ ಬಡ ಜನರ ಮನೆಗಳಿಗೆ ಆಹಾರ ಧಾನ್ಯ ವಿತರಿಸಿದರು.ಈ ಸಂದರ್ಭದಲ್ಲಿ ವೇದಿಕೆ ತಾಲೂಕು ಅಧ್ಯಕ್ಷ ಚಂದ್ರಶೇಖರ ಡೊಣೂರ,ಪ್ರದೀಪ ಕದರಾಪುರ,ಜಗದೀಶ ಪಾಟೀಲ ಸುಗೂರ,ವೀರೇಶ ಪಂಚಾಂಗಮಠ,ಕೊಟ್ರಯ್ಯ ಸ್ವಾಮಿ,ಭಾಗೇಶ ಕಾಳಗಿ,ಶಿವುಕುಮಾರ ಹಳ್ಳದ,ಮಲ್ಲಿಕಾರ್ಜುನ ಹಳ್ಳದ ಸೇರಿದಂತೆ ಅನೇಕರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…