ಕಲಬುರಗಿ: ಕೋವಿಡ್-19 ಪ್ರಕರಣ ಕಂಡುಹಿಡಿಯಲು ಕಲಬುರಗಿ ನಗರದ ನಾಲ್ಕು ಕಡೆ ಕಾರ್ಯಾರಂಭ ಮಾಡಿರುವ ಜ್ವರ ತಪಾಸಣಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಕಲಬುರಗಿ ನಗರದ ಪ್ರಾಥಮಿಕ ಅರೋಗ್ಯ ಕೇಂದ್ರ ಅಶೋಕ ನಗರ, ಪ್ರಾಥಮಿಕ ಅರೋಗ್ಯ ಕೇಂದ್ರ ಶಿವಾಜಿ ನಗರ, ಪ್ರಾಥಮಿಕ ಅರೋಗ್ಯ ಕೇಂದ್ರ ನ್ಯೂ ರೆಹಮತ್ ನಗರ ಹಾಗೂ ತಾರಪೈಲ್ ಸಾರ್ವಜನಿಕ ಆಸ್ಪತ್ರೆಯ ಜ್ವರ ತಪಾಸಣಾ ಕೇಂದ್ರಗಳಿಗೆ ಭೇಟಿ ನೀಡಿದರು.
ಇದಲ್ಲದೆ ಯೂನಾನಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಕ್ವಾರಂಟೈನ್ ವಾರ್ಡ್ ಸಹ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಡಿ.ಹೆಚ್.ಓ ಡಾ.ಎಂ.ಎ.ಜಬ್ಬಾರ ಸೇರಿದಂತೆ ಇನ್ನಿತರ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.
ಫೀವರ್ ಕ್ಲಿನಿಕ್: ದಿನದ 24 ಗಂಟೆಗಳ ಕಾಲ ಜ್ವರ ತಪಾಸಣಾ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು, ಪಾಳಿ ಆಧಾರದ ಮೇಲೆ ವೈದ್ಯರು, ಸ್ಡಾಫ್ ನರ್ಸ್ ಹಾಗೂ ಇನ್ನಿತರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಲಿದ್ದಾರೆ.
ನೆಗಡಿ, ಕೆಮ್ಮು, ಜ್ವರ ಹಾಗು ಉಸಿರಾಟದ ತೊಂದರೆ ಕಂಡುಬಂದಲ್ಲಿ ಕಲಬುರಗಿ ನಗರದ ಸಾರ್ವಜನಿಕರು ಸಮೀಪದ ಈ ಜ್ವರ ತಪಾಸಣಾ ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆಗೊಳಪಟ್ಟು ಚಿಕಿತ್ಸೆ ಪಡೆಯಬಹುದಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…