25 ಲೋಕಸಭೆ ಸದಸ್ಯರು ನಾಲಾಯಕರು: ಪ್ರಿಯಾಂಕ್ ಖರ್ಗೆಗೆ ಹೇಳಿಕೆ ಮಾಜಿ ಶಾಸಕ ವಾಲ್ಮೀಕಿ ನಾಯಕ್ ತಿರುಗೇಟು

ಚಿತ್ತಾಪುರ: ಕಳೆದ ಲೋಕಸಭೆ ಚುನಾವಣೆಯಲ್ಲಿ 25 ಸದಸ್ಯರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ ಅವರೆಲ್ಲರೂ ನಾಲಯಕರು ಎಂದು ಪ್ರಿಯಾಂಕ ಖರ್ಗೆ ಹೇಳುತ್ತಾರೆ. ಅವರಿಗೆ ಅನುಭವದ ಕೊರತೆ ಇದೆ ಎಂದು ಬಿಜೆಪಿ ಮಾಜಿ ಶಾಸಕ ವಾಲ್ಮೀಕಿ ನಾಯಕ್ ತಿರುಗೇಟು ನೀಡಿದರು.

ಪಟ್ಟಣದ ಬಿಜೆಪಿ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಮಲ್ಲಿಕಾರ್ಜುನ ಖರ್ಗೆ ಅವರು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು. ಆದರೆ ಅವರು ಇಲ್ಲಿವರೆಗೂ ಯಾರ ಬಗ್ಗೆಯೂ ಇಂತಹ ಪದಗಳನ್ನು ಹೇಳಿಲ್ಲ ಆದರೆ ಪ್ರಿಯಾಂಕ ಖರ್ಗೆ ಅವರಿಗೆ ಇಂತಹ ಬಾಷೆ ಶೋಭೆ ತರುವುದಿಲ್ಲ ಆದ್ದರಿಂದ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದರು.

ಸಂಸದ ಡಾ, ಉಮೇಶ್ ಜಾಧವ್, ಶಾಸಕ ಬಸವರಾಜ್ ಮತ್ತಿಮೂಡ, ಚಿತ್ತಾಪುರ ಬಂದು ಅಧಿಕಾರಿಗಳ ಸಭೆ ನಡೆಸುತ್ತಾರೆ ನನಗೆ ಯಾಕೆ ಮಾಹಿತಿ ನೀಡಿಲ್ಲ ಎಂದು ಕೇಳುತ್ತಾರೆ, ಉಮೇಶ್ ಜಾದವ್ ಲೋಕಸಭೆ ಸದಸ್ಯರಿದ್ದಾರೆ ಅವರು ನಿಮ್ಮನ್ನು ಕೇಳಿ ಅಧಿಕಾರಿಗಳ ಸಭೆ ಮಾಡಬೇಕಾ? ಬಸವರಾಜ್ ಮತ್ತಿಮೂಡ ಅವರಿಗೂ ಚಿತ್ತಾಪುರ ತಾಲೂಕಿನ ಅಧಿಕಾರಿಗಳ ಸಂಬಂಧ ಪಡುತ್ತಾರೆ ಅವರು ನಿಮಗೆ ಕೇಳಿ ಬರಬೇಕಾ? ಅಧಿಕಾರಿಗಳು ನಿಮಗೆ ಫೋನ್ ಕರೆ ಮಾಡಿರುತ್ತಾರೆ ಆದರೆ ನೀವು ಬೇರೆ ಯಾವುದೂ ಕೆಲಸದಲ್ಲಿದ್ದ ಕಾರಣ ಕರೆ ಸ್ವೀಕರಿಸಿಲ್ಲ ಅನಿಸುತ್ತದೆ ಎಂದು ಹೇಳಿದರು.

ರಾಜ್ಯ ಸರ್ಕಾರ ವಿತರಿಸುತ್ತಿರುವ ಹಾಲನ್ನು ಪುರಸಭೆ ಕಾಂಗ್ರೆಸ್ ಸದಸ್ಯರು ಪ್ರಿಯಾಂಕ ಖರ್ಗೆ ಅವರು ನೀಡುತ್ತಿದ್ದಾರೆ ಎಂದು ಹೇಳಿ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ಹಾಲು ಆಹಾರಧಾನ್ಯವನ್ನು ಬಿಜೆಪಿ ಸರ್ಕಾರ ನಿರಾಶ್ರಿತರಿಗೆ ಕೂಲಿಕಾರ್ಮಿಕರಿಗೆ ಬಡವರಿಗೆ ವಿತರಿಸುತ್ತಿದೆ ಇದರಲ್ಲಿ ಕಾಂಗ್ರೆಸ್ ಹಾಗೂ ಪ್ರಿಯಾಂಕ ಖರ್ಗೆ ಅವರ ಕೊಡುಗೆ ಏನೂ ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನೀಲಕಂಠರಾವ್ ಪಾಟೀಲ್, ಮಲ್ಲಿಕಾರ್ಜುನ್ ಎಮ್ಮೆನೂರ, ಪ್ರಭು ಗಂಗಣಿ, ಮಹೇಶ್ ಬಡಿಗೇರಿ, ಮಲ್ಲಿಕಾರ್ಜುನ್ ಪೂಜಾರಿ, ರಮೇಶ್ ಬೊಮ್ಮನಹಳ್ಳಿ, ದಿಲೀಪ್ ಹೊಸೂರಕರ್ ಶ್ಯಾಮ ಮೇಧಾ ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420