ಶಹಾಬಾದ: ಬಿಸಿಲಿನ ತಾಪಕ್ಕೆ ಕಾದ ಕಾವಲಿ ಕಾವಲಿಯಂತಾಗಿದ್ದ ನಗರದಲ್ಲಿ ಮಂಗಳವಾರ ಮಧ್ಯಾಹ್ನ ವೇಳೆಗೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಿದ್ದು, ಜನತೆಯಲ್ಲಿ ಹರ್ಷ ಮೂಡಿಸಿದೆ.
ಕರೊನಾ ಹರಡುವ ಭೀತಿಯಿಂದ ಕಳೆದ ಹನ್ನೆರಡು ದಿನಗಳಿಂದ ಮನೆಯಲ್ಲೇ ಬಂದಿಯಾಗಿರುವ ಜನತೆ ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದರು. ಕೆಲವರು ಏರ್ ಕೂಲರ್ ಮೊರೆ ಹೋದರೇ, ಇನ್ನೂ ಕೆಲವರು ಏರ ಕಂಡಿಷನರ್ ಮೋರೆ ಹೋಗಿದ್ದರು. ಮಂಗಳವಾರ ಮಧ್ಯಾಹ್ನ ವೇಳೆ ತಾಲೂಕಿನಲ್ಲಿ ಗುಡುಗು ಸಹಿತ ಸುಮಾರು ಅರ್ಧ ಗಂಟೆ ಸಾಧಾರಣ ಮಳೆಯಾದ ಪರಿಣಾಮ ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.ತಾಲೂಕಿನಲ್ಲಿ ಮೋಡ ಕವಿದ ವಾತಾವರಣ ಮೂಡಿದ್ದು, ರಾತ್ರಿಯೂ ಮಳೆಯಾಗುವ ಸಾಧ್ಯತೆಯಿದೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…