ಬಿಸಿ ಬಿಸಿ ಸುದ್ದಿ

ತೊಗರಿ ಮಿತಿ ಹೆಚ್ಚಳಕ್ಕೆ ನಯಸವೇರ ಸಂಘಟನೆ ಒತ್ತಾಯ

ಕಲಬುರಗಿ: ಕೊರೋನಾ ವೈರಸ್ ಸೋಂಕಿನಿಂದ ರೈತರು ಬೆಳೆದ ತರಕಾರಿ ಆಹಾರ ಧಾನ್ಯಗಳು ಮತ್ತು ಹಣ್ಣು-ಹಂಪಲುಗಳು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸರ್ಕಾರವೇ ಖರೀದಿಸಬೇಕು ಮತ್ತು ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ನಯಸವೇರ ಸಂಘಟನೆ ಅಧ್ಯಕ್ಷ ಮೋದಿನ್ ಪಟೇಲ ಅಣಬಿ ಒತ್ತಾಯಿಸಿದ್ದಾರೆ.

ಇಂದು ನಗರಕ್ಕೆ ಆಗಮಿಸಿದ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಅವರು 14.06 ಕೋಟಿ ರೈತರಿಗೆ ಕಳೆದ ಸಾಲಿನಲ್ಲಿ ಕಿಸಾನ್ ಸಮ್ಮನ್ ಯೋಜನೆ ಅಡಿಯಲ್ಲಿ ವರ್ಷ 8.5 ಕೋಟಿ ವಿತರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಕೊರೋನಾ ಪರಿಹಾರ ಘೋಷಣೆಯಲ್ಲಿ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದರು.

ಕೇರಳ ಸರ್ಕಾರವು 1 ಕುಟುಂಬಗಳಿಗೆ ತಿಂಗಳಿಗೆ ಸರಿಹೋಗುವಂತೆ 50ಕೆಜಿ ಆಹಾರಧಾನ್ಯ ಮೂರು ತಿಂಗಳ ನಂತೆ ಬೇಕಾಗುವಷ್ಟು ಕೊಟ್ಟಿದೆ .ಪ್ರತಿ ತಿಂಗಳಿಗೆ ತಲಾ ಒಬ್ಬರಿಗೆ 15 ಕೆಜಿ ಆಹಾರ ಧಾನ್ಯ ಖರ್ಚಾಗುತ್ತೆ .ಆದರೆ ಸರಕಾರ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿರುವುದು ಮತ್ತು ಕೊಡ್ತಾ ಇರೋದು ದುಃಖಕರ ಸಂಗತಿ. ಇದರಿಂದ ಜನರ ಹಸಿವು ನೀಗಿಸುವುದಕ್ಕಾಗಿ ಆಗಲ್ಲ ಆದ್ದರಿಂದ ಸರ್ಕಾರ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಕೊರೋನಾ ಕರಾಳ ಛಾಯೆ ಜನರ ಬದುಕು ಹಿಂಡಿ ಹಿಪ್ಪಿ ಮಾಡಿದ್ದು. ಹಸಿವಿನಿಂದ ಹೊಟ್ಟೆ ತುಂಬಿಸಿಕೊಳ್ಳಲು ಇಲ್ಲಿನ ಬಡ ಮಾತೆಯರು ತಮ್ಮ ಕೊರಳಿನ ಮಾಂಗಲ್ಯ ಮತ್ತು ಕಾಲುಂಗುರ ಮಾರಿ ಹೊಟ್ಟೆ ತುಂಬಿಸಿಕೊಳ್ಳುತ್ತಿರುವ ಘಟನೆ ನಗರದ ಸಂತ್ರಸ್ವಾಡಿ ಯಲ್ಲಿ ನಡೆದಿದ್ದು ಸರಕಾರ ಎಚ್ಚೇತುಕೊಂಡು ನೆರವು ನೀಡಬೇಕೆಂದು ಒತ್ತಾಯಿದ್ದಾರೆ.

ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಂಪ್ರಭು ಪಾಟೀಲ್, ಸಲೀಂ ಅಹ್ಮದ್ ಚಿತ್ತಾಪುರಿ, ಶೇಕ್ ಸಿರಾಜ್ ಪಷಾ, ಸಜಿದ್ ಅಲಿ ರಂಜೋಳವಿ, ಸೈರಾ ಬಾನು ಅಬ್ದುಲ್ ವಾಹಿದ್, ಸಲಿಂ ಸಗರಿ, ಹೈದರಲಿ ಇನಮ್ದಾರ, ಅನೇಕರು ಹಾಜರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago