ಸ್ವಯಂ ರಕ್ಷಣೆಯೇ ಆರೋಗ್ಯಕರವಾದ ಮುಖ್ಯ ಅಂಶವಾಗಿದೆ : ಅತ್ತಾರ್

ಕಲಬುರಗಿ: ಪ್ರಸ್ತುತ ಸನ್ನಿವೇಶದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ರಕ್ಷಣೆ ಮಾಡಿಕೊಳ್ಳುವುದರ ಮೂಲಕ ಆರೋಗ್ಯಕರ ವಾತಾವರಣವನ್ನು ಸೃಷ್ಟಿ ಮಾಡಬೇಕೆಂದು ಮೌಲಾನಾ ಸೈಯದ್ ಅತ್ತಾರ್ ಇಲ್ಲಿ ಕರೆ ನೀಡಿದರು.

ಅವರು ಅಲ್ಲಮ ಪ್ರಭು ಅರ್ಬನ್ ಮತ್ತು ರೂರಲ್ ಡವಲಪ್‍ಮೆಂಟ್ ವೆಲ್‍ಫೇರ್ ಚಾರಿಟೇಬಲ್ ಟ್ರಸ್ಟ್(ರಿ) ವತಿಯಿಂದ ಅತೀ ಕಡು ಬಡವ ಕುಟುಂಬದ ಸದಸ್ಯರಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡುತ್ತಾ ವಿಶ್ವದಲ್ಲಿ ಕರೋನಾ ವೈರಸ್‍ನಿಂದ ಸಾರ್ವಜನಿಕ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಇದನ್ನು ತಡೆಗಟ್ಟಲು ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರು ಸೂಕ್ತವಾದ ಕ್ರಮವನ್ನು ಕೈಕೊಳ್ಳುವುದರ ಮೂಲಕ ದೇಶ ಹಾಗೂ ರಾಜ್ಯದ ಜನತೆಯ ರಕ್ಷಣೆಗೆ ಬದ್ದರಾಗಿರುವುದು ತುಂಬಾ ಸಂತೋಷದ ಸಂಗತಿ. ಸಮಾಜದಲ್ಲಿ ಆರೋಗ್ಯಕರ ವಾತಾವರಣ ಸೃಷ್ಟಿಯಾಗಬೇಕಾದರೆ ದೇಶದ ಜನತೆ ಮನೆಯಲ್ಲಿ ಕುಳಿತುಕೊಂಡು ಸರ್ಕಾರದ ಜೊತೆ ಕೈ ಜೋಡಿಸಬೇಕು ಹಾಗೂ ಕೊರೋನಾ ವೈರಸ್‍ನ್ನು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ರಕ್ಷಣೆ ಮಾಡಿಕೊಳ್ಳುವ ಮೂಲಕ ಆರೋಗ್ಯಕರ ವಾತಾವರಣ ಸಮಾಜದಲ್ಲಿ ಸೃಷ್ಟಿ ಮಾಡಬೇಕೆಂದು ಸಲಹೆ ನೀಡಿದರು.

ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಲಮ ಪ್ರಭು ಟ್ರಸ್ಟ್ ವತಿಯಿಂದ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಇದರ ಸದುಪಯೋಗವನ್ನು ಬಡವರು ಬಳಸಿಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಹುಮನ್ ರೈಟ್ಸ್ ಕಾರ್ಯದರ್ಶಿಯಾದ ಮಹಮ್ಮದ್ ಸಾಬೀರ್ ಅಮರ್ ಮತ್ತು ವಿಜಯ ದಳಪತಿ, ಮೋಗಟಾ ಪಟೇಲ್ ಸೇರಿದಂತೆ ಮುಂತಾ ದವರು ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420