ಕಾಂಗ್ರೆಸ್ ಸದಸ್ಯರಿಂದ ಕೂಲಿ ಕಾರ್ಮಿಕರಿಗೆ ದವಸದಾನ್ಯ ಹಂಚಿಕೆ

ವಾಡಿ: ಕೊರೊನಾ ವೈರಸ್ ವಿರುದ್ಧದ ಲಾಕ್‌ಡೌನ್ ಹೋರಾಟಕ್ಕೆ ಸಿಕ್ಕು ನಲುಗಿದ ಕೂಲಿ ಕಾರ್ಮಿಕರು, ಕಳೆದ ಒಂದು ತಿಂಗಳಿಂದ ಕೆಲಸವಿಲ್ಲದೆ ಮನೆಯಲ್ಲಿ ಉಳಿದು ಹಸುವಿನ ಸಂಕಟ ಅನುಭವಿಸುತ್ತಿದ್ದಾರೆ. ದಿನಗೂಲಿ ಕುಟುಂಬಗಳ ನೆರವಿಗೆ ದಾವಿಸಿರುವ ಪುರಸಭೆ ಕಾಂಗ್ರೆಸ್ ಸದಸ್ಯರು, ಸಾವಿರಾರು ಬಡ ಕುಟುಂಬಗಳಿಗೆ ದವಸದಾನ್ಯಗಳನ್ನು ಹಂಚುವ ಮೂಲಕ ನೆರವಿನ ಹಸ್ತ ಚಾಚಿದ್ದಾರೆ.

ಎಸಿಸಿ ಕಾರ್ಖಾನೆ ಸ್ಥಾಪನೆಯಿಂದ ವಾಡಿಯಲ್ಲಿ ದುಡಿಯುವ ಜನರ ಸಂಖ್ಯೆ ಹೆಚ್ಚಿದ್ದು, ದಿನಗೂಲಿ ಹಾಗೂ ಗುತ್ತಿಗೆ ಕಾರ್ಮಿಕರ ದಂಡೇ ಇಲ್ಲಿ ಶೇ.೯೦ ರಷ್ಟು ವಾಸವಿದೆ. ಇಂದು ದುಡಿದರೆ ಮಾತ್ರ ಹೊಟ್ಟೆಗೆ ಊಟ, ಒಂದು ದಿನ ಕೆಲಸ ಸಿಗದಿದ್ದರೆ ಹೊಟ್ಟೆಗೆ ತಣ್ಣೀರು ಬಟ್ಟೆ ಎಂಬಂತಹ ಕುಟುಂಬಗಳು ದೊಡ್ಡ ಸಂಖ್ಯೆಯಲ್ಲಿದ್ದು, ಕೊರೊನಾ ಭೀತಿಯಿಂದ ಸೃಷ್ಠಿಯಾದ ಲಾಕ್‌ಡೌನ್ ಫಜೀತಿ ದುಡಿಯುವ ಕೈಗಳ ಕೆಲಸ ಕಸಿದುಕೊಂಡಿದೆ. ಮನೆಬಿಟ್ಟು ಹೊರ ಬರಲಾಗದ ಸ್ಥಿತಿಯಲ್ಲಿ ಬದುಕು ಹೇಗೆ ಎಂಬ ಆತಂಕದಲ್ಲಿ ಕಾರ್ಮಿಕರಿದ್ದಾರೆ.

ಮಹಾಮಾರಿ ಕೊರೊನಾ ತಂದಿಟ್ಟ ಸಂಕಟದ ದಿನಗಳಿಗೆ ಅಕ್ಷರಶಃ ನಲುಗಿರುವ ಸ್ಥಳೀಯ ಬಡ ಕುಟುಂಬಗಳ ನೆರವಿಗೆ ಮುಂದಾಗಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ಮಹೆಮೂದ್ ಸಾಹೇಬ, ಪುರಸಭೆ ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಚುನಾಯಿತ ಸದಸ್ಯರಾದ ಝರೀನಾ ಬೇಗಂ, ಶರಣು ನಾಟೀಕಾರ, ಗುಜ್ಜಾಬಾಯಿ ಸಿಂಗೆ, ಟೀಂ ಪ್ರಿಯಾಂಕ್ ಖರ್ಗೆ ಮುಖಂಡ ಶಮಶೀರ್ ಅಹ್ಮದ್, ಮಹ್ಮದ್ ಇರ್ಫಾನ್, ಯುವ ಮುಖಂಡರಾದ ಸುನೀಲ ಗುತ್ತೇದಾರ, ಮಹ್ಮದ್ ಅಶ್ರಫ್, ಹಣಮಯ್ಯ ಗುತ್ತೇದಾರ, ವಿಜಯಕುಮಾರ ಸಿಂಗೆ ಮತ್ತಿತರರು ಒಟ್ಟು ಒಂಬತ್ತು ಸ್ಲಂ ಬಡಾವಣೆಗಳ ನೂರಾರು ದಿನಗೂಲಿ ಕಾರ್ಮಿಕರಿಗೆ ಅಕ್ಕಿ, ಬೇಳೆ, ಹಿಟ್ಟು, ಸಕ್ಕರೆ, ಎಣ್ಣೆ ಪಾಕೇಟ್‌ಗಳನ್ನು ಉಚಿತವಾಗಿ ತಲುಪಿಸುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಒಂದೊಹೊತ್ತಿನ ಊಟಕ್ಕೂ ಚಿಂತೆಯಲ್ಲಿದ್ದ ಬಡ ಜನರ ಹೊಟ್ಟೆಗೆ ತಿಂಗಳ ಗಂಜಿ ದೊರೆತಂತಾಗಿದ್ದು, ಸಾರ್ವಜನಿಕರ ಮೆಚ್ಚುಗೆ ಕಾರಣವಾಗಿದೆ.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

6 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

7 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

7 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

7 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

7 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420