ಶಹಾಬಾದ: ನಗರದಲ್ಲಿ ಬುಧವಾರ ನಡೆಯಬೇಕಿದ್ದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವ ತಾಲೂಕಾಢಳಿತದ ಆದೇಶದ ಮೇರೆಗೆ ರದ್ದುಗೊಳಿಸಿದ್ದರಿಂದ ದೇವಸ್ಥಾನ ಸಂಪೂರ್ಣ ಖಾಲಿಖಾಲಿಯಾಗಿತ್ತು.
ಕರೋನಾ ವೈರಸ್ ಹರಡುತ್ತಿರುವುದರಿಂದ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಢಳಿತದ ಆದೇಶದ ಮೇರೆಗೆ ತಾಲೂಕಾಢಳಿತ ಜಾತ್ರೆ ರದ್ದು ಪಡಿಸುವಂತೆ ಆದೇಶ ನೀಡಲಾಗಿತ್ತು. ಆ ಆದೇಶದ ಮೇರೆಗೆ ದೇವಸ್ಥಾನ ಕಮಿಟಿಯವರು ಜಾತ್ರೆಯನ್ನು ರದ್ದುಗೊಳಿಸಿದ್ದಾರೆ. ಇದರಿಂದ ದೇವಸ್ಥಾನ ಜನರಿಲ್ಲದೇ ಭಣಭಣ ಗುಡುಗುತ್ತಿತ್ತು. ಕೇವಲ ರಥೋತ್ಸವದ ದಿನವಾದ ಇಂದು ರಥಕ್ಕೆ ಪೂಜೆ ಸಲ್ಲಿಸುವದಕ್ಕೆ ಮಾತ್ರ ಸಿಮಿತಗೊಳಿಸಲಾಯಿತು.
ವಿಶೇಷ ಪೂಜೆ, ನಂತರ ನಾಲ್ಕಾರು ಜನರು ಮಾತ್ರ ರಥದ ಮನೆಯಿಂದ ರಥವನ್ನು ಹೊರಗೆ ತಂದು ಪೂಜೆ ಸಲ್ಲಿಸುವದರೊಂದಿಗೆ ಮುಕ್ತಾಯಗೊಳಿಸಲಾಯಿತು.
ದೇವಸ್ಥಾನದ ಮಹಾದ್ವಾರಕ್ಕೆ ಬೀಗ ಹಾಕಿ ದೇವಸ್ಥಾನಕ್ಕೆ ಯಾರು ಬರದಂತೆ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿತ್ತು.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…