ಕಡು ಬಡವರಿಗೆ ನಿರ್ಗತಿಕರಿಗೆ ಸಹಾಯ ಮಾಡಿ: ವ್ಯವಸ್ಥಾಪಕ ನಾಗರಾಜ

ಶಹಾಬಾದ: ಕೊರೋನಾ ರೋಗ ಇಡೀ ವಿಶ್ವಕ್ಕೆ ತಲೆನೋವಾಗಿ ಕಾಡುತ್ತಿದೆ.ಯಾರಿಗಾದರೂ ಕಡು ಬಡವರಿಗೆ ನಿರ್ಗತಿಕರಿಗೆ ಸಹಾಯ ಮಾಡುವ ಮನಸ್ಸಿದ್ದರೇ ಮಾಡಿ.ಇಲ್ಲದಿದ್ದರೇ ಮನೆಯಲ್ಲಿರಿ ಎಂದು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ನಾಗರಾಜ ಹೇಳಿದರು.

ಅವರು ನಗರದ ಎಸ್‌ಬಿಐ ಬ್ಯಾಂಕ್ ಆವರಣದಲ್ಲಿ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಬ್ಯಾಂಕ್ ವತಿಯಿಂದ ಆಹಾರ ಧಾನ್ಯಗಳನ್ನು ವಿತರಿಸಿ ಮಾತನಾಡಿ, ಕೊರೋನಾ ಲಾಕ್ ಡೌನ್ ಮಾಡಿದ್ದರಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿರುವುದು ನಿಜ.ಅದರಲ್ಲೂ ಕಡುಬಡವರು ಆಹಾರಕ್ಕಾಗಿ ತೊಂದರೆಪಡಬೇಕಾದ ಪರಿಸ್ಥಿತಿಯುಂಟಾಗಿದೆ.

ಕಡು ಬಡವರಿಗೆ, ನಿರ್ಗತಿಕರಿಗೆ ಆಹಾರದ ಸಮಸ್ಯೆಯಾಗುತ್ತಿರುವುದನ್ನು ಕಂಡು ದೇಶವೇ ಅವರಿಗೆ ಸಹಾಯ ಹಸ್ತ ಚಾಚುತ್ತಿದೆ.ಅದರಂತೆ ನಮ್ಮ ಬ್ಯಾಂಕಿನಿಂದ ನಾವು ಅವರಿಗೆ ೫ ಕ್ವಿಂಟಾಲ್ ಅಕ್ಕಿ, ಅರ್ಧ ಕ್ವಿಂಟಾಲ್ ತೊಗರಿ ಬೇಳೆಯನ್ನು ನೀಡುತ್ತಿದ್ದೆವೆ ಎಂದು ಹೇಳಿದರು.

ಸಹಾಯ ಮಾಡಲು ನಗರದ ಎಸ್‌ಬಿಐ ಬ್ಯಾಂಕ್ ವತಿಯಿಂದ ತಹಸೀಲ್ದಾರ ಅವರಿಗೆ ೫ ಕ್ವಿಂಟಾಲ್ ಅಕ್ಕಿ, ಅರ್ಧ ಕ್ವಿಂಟಾಲ್ ತೊಗರಿ ಬೇಳೆಯನ್ನು ಹಸ್ತಾಂತರ ಮಾಡಿದರು. ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಆಹಾರ ಧಾನ್ಯಗಳನ್ನು ನೀಡುವವರು ಅಥವಾ ಸಹಾಯ ಹಸ್ತ ಚಾಚುವವರು ತಾಲೂಕಾಢಳಿತಕ್ಕೆ ಒಪ್ಪಿಸಬೇಕೆಂದು ಮನವಿ ಮಾಡಿದರು.

ಕೊರೊನಾದಿಂದ ಬಚಾವ್ ಆಗಲು ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಪರಿಹಾರ.ಯಾರು ಮನೆಯಿಂದ ಅನಾವಶ್ಯಕವಾಗಿ ಹೊರಬರಬೇಡಿ ಎಂದು ಮನವಿ ಮಾಡಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420