ಯಾದಗಿರಿ: ಭಗವಾನ್ ಮಹಾವೀರ ಜಯಂತಿಯ ಅಂಗವಾಗಿ ಮಹಾಮಾರಿ ಕೋರೋನಾ ಭೀತಿಯಿಂದ ಸಂಕಷ್ಟಕ್ಕೆ ಈಡಾಗಿರುವ ಹಸಿದ ಹೊಟ್ಟೆಗೆ ಅನ್ನ ನೀಡಲು ಇಲ್ಲಿಯ ಆಯಾರಕರ್ ಪರಿವಾರದಿಂದ ಪ್ರತಿ ಕುಟುಂಬಕ್ಕೆ ೧೦ಕೆಜಿ ಅಂತೆ ಸುಮಾರು ಒಂದು ಲಕ್ಷ ರೂಪಾಯಿ ಬೆಲೆಯ ೩೦ ಕ್ವಿಂಟಲ್ ಜೋಳ ಪಾಕೀಟುಗಳನ್ನು ವಿತರಿಸುವ ಕಾರ್ಯಕ್ಕೆ ಸೋಮವಾರ ಶಹಪೂರ್ ಪೇಟೆಯಲ್ಲಿ ಶಾಸಕರಾದ ವೆಂಕಟರೆಡ್ಡಿ ಮುದ್ನಾಳ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಇಂತಹ ಸಂದಿಗ್ಧ ಸಮಯದಲ್ಲಿ ಬಡಕುಟುಂಬಗಳಿಗೆ ದಾನ ಮಾಡಲು ಉಳ್ಳವರು ಸ್ವಇಚ್ಛೆಯಿಂದ ಮುಂದೆ ಬರಬೇಕೆಂದು ಅವರು ಕರೆಕೊಟ್ಟರು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲೇ ಇದ್ದು ಸ್ವಚ್ಛತೆಯ ಕಡೆಗೆ ಗಮನಹರಿಸಿದಾಗ ಮಾತ್ರ ರೋಗವನ್ನು ತಡೆಗಟ್ಟಬಹುದು ಎಂದರು.
ಈ ಸಂದರ್ಭದಲ್ಲಿ ಸುಭಾಷ ಆಯಾರ್ಕರ್, ವಿಲಾಸ್ ಪಾಟೀಲ್, ಅಯ್ಯಣ್ಣ ಹುಂಡೆಕಾರ್ ಖಂಡಪ್ಪ ದಾಸನ್ ಡಾ|| ಸಿದ್ದಪ್ಪ ಹೊಟ್ಟೆ, ಬಸವರಾಜ್ ಮೋಟ್ನಳ್ಳಿ, ರಾಜು ಎಂದೆ, ನಾಗೇಂದ್ರ ಜಾಜಿ, ಶೇಖರ್ ಅರಳಿ, ಶಿವಕುಮಾರ್ ಅರುಣಿ ದಶರತ್ ಇನ್ನಿತರರು ಇದ್ದರು ಸುಮಾರು ಒಂದು ೩೦೦ ಕುಟುಂಬಗಳಿಗೆ ಜೋಳ ವಿತರಿಸಲಾಯಿತು
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…