ಕಲಬುರಗಿ: ಮಹಾಮಾರಿ ಕೊರೋನಾ ನಿಯಂತ್ರಣಕ್ಕಾಗಿ ಹೋರಾಡುತ್ತಿರುವ ಸೇವಾ ಕಾರ್ಯಕರ್ತರಿಗೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ವೀರೇಂದ್ರ ಪಾಟೀಲ್ ರಾಯಕೋಡ್ ಮತ್ತು ಸಮಾಜ ಸೇವಕ ಪೃಥ್ವಿ ಅವರು ವಿನೂತನ ರೀತಿಯ ಗುಣಮಟ್ಟದ ಮಾಸ್ಕ್ಗಳನ್ನು (ಫೇಸ್ ಶೀಲ್ಡ್) ಗುರುವಾರ ವಿತರಿಸಿದರು.
ಮಹಾಮಾರಿ ಕೊರೋನಾ ವಿರುದ್ಧ ತಮ್ಮ ಪ್ರಾಣ ಒತ್ತೆ ಇಟ್ಟು ಹೋರಾಡುತ್ತಿರುವ ಪೋಲಿಸರು, ವೈದ್ಯರು ಹಾಗೂ ಪೌರ ಕಾರ್ಮಿಕರಿಗೆ ಗುಣಮಟ್ಟದ ಮಾಸ್ಕ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಡಾ. ಬಸವರಾಜ್ ಪಾಟೀಲ್ ರಾಯಕೋಡ್ ಅವರು ಮಾತನಾಡಿ, ಈಗಾಗಲೇ ೧೦೦ ಮುಖ ಕವಚಗಳನ್ನು ತಯಾರಿಸಲಾಗಿದೆ. ಒಂದು ಮುಖ ಕವಚಕ್ಕೆ ೧೦೦ರೂ.ಗಳು ವೆಚ್ಚ ಆಗುತ್ತಿದ್ದು, ದಿನಕ್ಕೆ ೪೦ ಮಾಸ್ಕ್ಗಳನ್ನು ತಯಾರಿಸಲಾಗುತ್ತಿದೆ. ತಯಾರಿಸಲಾದ ಮಾಸ್ಕ್ಗಳಲ್ಲಿ ಬಸವೇಶ್ವರ್ ಆಸ್ಪತ್ರೆಗೆ ೪೦ ಹಾಗೂ ಪೋಲಿಸ್ ಇಲಾಖೆಗೆ ೫೦ ಮಾಕ್ಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರಿಗೂ ಮಾಸ್ಕ್ಗಳನ್ನು ವಿತರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ನಗರ ಪೋಲಿಸ್ ಆಯುಕ್ತ ಎನ್. ಸತೀಶಕುಮಾರ್ ಅವರು ಉಪಸ್ಥಿತರಿದ್ದು, ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೊರೋನಾ ಸೋಂಕು ನಿರ್ಮೂಲನೆಯಾಗುವವರೆಗೂ ಜಾಗೃತಿ ಮೂಡಿಸಲಾಗುವುದು ಎಂದು ವೀರೇಂದ್ರ ಪಾಟೀಲ್ ರಾಯಕೋಡ್ ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…