ಬಿಸಿ ಬಿಸಿ ಸುದ್ದಿ

ಕೊರೊನಾ ಹರಡದಂತೆ ಮುಂಜಾಗೃತೆ ವಹಿಸಲು ಸಂಸದ ಖೂಬಾ ಮನವಿ

ಆಳಂದ: ಮಹಾಮಾರಿ ಕೊರೊನಾ ಹರಡದಂತೆ ನೋಡಿಕೊಳ್ಳಲು ಲಾಕ್‌ಡೌನ್‌ಗೆ ಸರ್ಕಾರದೊಂದಿಗೆ ನಾಗರಿಕರು ಸಹ ಕೈಜೊಡಿಸುವುದು ಅಗತ್ಯವಾಗಿದೆ ಎಂದು ಬೀದರ್ ಲೋಕಸಭಾ ಸದಸ್ಯ ಭಗವಂತ ಖೂಬಾ ಅವರು ಜನತೆಗೆ ಮನವಿ ಮಾಡಿದ್ದರು.

ಪಟ್ಟಣದ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಬಳಿಕ ಅವರು ತಾಲೂಕು ತಸೀಲ್ದಾರರಿಂದ ಲಾಕ್‌ಡೌನ್ ಸಾಧಕ ಬಾಧಕ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿ ಮಾತನಾಡಿದ ಅವರು, ಈ ಮಹಾಮಾರಿ ವೈರಸ್ ಹರಡದಂತೆ ಜನಹಿತಕ್ಕಾಗಿ ಇಡೀ ದೇಶವೇ ಸಂಪೂರ್ಣವಾಗಿ ಲಾಕ್‌ಡೌನ್ ಆಗಿದ್ದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದರು.

ಕ್ಷೇತ್ರದಲ್ಲಿ ಈ ಕಾರ್ಯಕ್ಕೆ ಶಾಸಕ ಸುಭಾಷ ಗುತ್ತೇದಾರ ಅವರು ಸೇರಿ ತಾಲೂಕಿನ ಅಧಿಕಾರಿಗಳು ತಮ್ಮ ಜೀವದ ಹಂಗು ತೊರೆದು ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ನಿರ್ಗತಿಕರಿಗೆ ಆಹಾರ ಒದಗಿಸುವುದಾಗಲಿ ಬಡವರಿಗೆ ದವಸ ಧಾನ್ಯಗಳು ಹೀಗೆ ವ್ಯಾಪಾರಿಗಳು ಸಹ ಕಿರಾಣಿ ಅಂಗಡಿಗಳನ್ನು ತೆರೆದು ದವಸ ಧಾನ್ಯಗಳನ್ನು ಒದಗುಸತ್ತಿದ್ದಾರೆ. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಈ ಕೊರೊನಾ ಹರಡಂತೆ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಜನರ ಜೊತೆಯಲಿದೆ. ಜನರ ಜೀವ ಉಳಿಸಲು ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪಣತೊಟಿದೆ. ಯಾರು ಸಹ ದೃತಿಗೆಡಬಾರದು ಎಂದರು.

ಲಾಕ್‌ಡೌನ್ ಬರಿ ಜನತೆಗಷ್ಟೇ ಅಲ್ಲ ಪೊಲೀಸರು ಸಂಕಷ್ಟದಲಿದ್ದು, ತಾಳ್ಮೆಯಿಂದರಬೇಕು. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಗರಿಬ ಕಲ್ಯಾಣ ಯೋಜನೆಯನ್ನು ರೂಪಿಸಿ ದೇಶದ ೮೦ ಕೋಟಿ ಜನರಿಗೆ ೧ ಲಕ್ಷ ೭೫ ಸಾವಿರ ಕೋಟಿ ಹಣದ ವ್ಯವಸ್ಥೆ ಮಾಡುತ್ತಿದ್ದಾರೆ. ಜನಧನ ಖಾತೆಗೆ ೫೦೦ ರೂ. ಬಂದಿವೆ. ಕಿಸಾನ ಸಮ್ಮಾನ ಯೋಜನೆ ಖಾತೆಗಳಿಗೆ ಹಣ ಜಮಾ ಕೈಗೊಳ್ಳಲಾಗುತ್ತಿದೆ. ಬಡವರಿಗೆ ಎರಡು ತಿಂಗಳ ರೇಷನ್ ಏಕಕಾಲಕ್ಕೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ಕಡೆ ಇದರಿಂದ ಜನದಟ್ಟಣೆ ಆಗುತ್ತಿದೆ. ದಟ್ಟಣೆ ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚಿಸಲಾಗುವುದು ಎಂದರು.

ತಹಸೀಲ್ದಾರ ದಯಾನಂದ ಪಾಟೀಲ ಅವರು ಮಾತನಾಡಿ, ಕೊರೊನಾ ವೈರಸ್ ಹರಡಂತೆ ಮುಂಜಾಗೃತ ಕ್ರಮವಾಗಿ ಅಧಿಕಾರಿಗಳ ತಂಡ ರಚಿಸಿ ಎಲ್ಲಡೆ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿ ಭಾಗದಲ್ಲಿ ನಾಲ್ಕು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಹೊರಗಿನಿಂದ ಬಂದವರಿಗೆ ತಪಸಣೆ ಕಾರ್ಯ ನಡೆಯುತ್ತಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳ ಸಭೆ ಕರೆದ ಸೂಚಿಸಲಾಗಿದೆ. ಬಡವರಿಗೆ ನಿರ್ಗತಿಕರಿಗೆ ಮೂರು ಹೊತ್ತು ಊಟದ ವ್ಯವಸ್ಥೆ ಅವರಿದ್ದಲಿಗೆ ಕೊಡಲಾಗುತ್ತಿದೆ. ಪುರಸಭೆ ಮೂಲಕ ಕೊಳಚೆ ಪ್ರದೇಶಗಳಿಗೆ ನಿತ್ಯ ಹಾಲು ವಿತರಿಸಲಾಗತ್ತಿದೆ. ತರಕಾರಿ ವ್ಯಾಪಾರ ಸಾಗಾಟಕ್ಕೆ ವಿನಾಯಿತಿ ನೀಡಲಾಗಿದೆ ಎಂದು ವಿವರಿಸಿದರು.
ಶಾಸಕ ಸುಭಾಷ ಗುತ್ತೇದಾರ, ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ ಇನ್ನಿತರರು ಉಪಸ್ಥತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

38 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

41 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

44 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago