ಶಹಾಬಾದ: ಕೋಲಿ ಸಮಾಜದ ಏಳ್ಗೆಗಾಗಿ ಸದಾಕಾಲ ತಮ್ಮನ್ನು ತಾವು ಅರ್ಪಿಸಿಕೊಂಡ ಸಮಾಜದ ಏಕೈಕ ನಾಯಕರೆಂದರೆ ವಿಠ್ಠಲ್ ಹೆರೂರ್ ಎಂದು ಕೋಲಿ ಸಮಾಜದ ಮುಖಂಡ ನಿಂಗಣ್ಣ ಹುಳಗೋಳಕರ್ ಹೇಳಿದರು.
ಅವರು ಶುಕ್ರವಾರ ಅಶೋಕ ನಗರದ ಅಂಬಿಗರ ಚೌಡಯ್ಯನವರ ಸಮುದಾಯ ಭವನದಲ್ಲಿ ಶಹಾಬಾದ ನಗರದ ಕೋಲಿ ಸಮಾಜ ಮತ್ತು ಗ್ರಾಮೀಣ ಕೋಲಿ ಸಮಾಜ ವತಿಯಿಂದ ಆಯೋಜಿಸಲಾದ ದಿ.ವಿಠ್ಠಲ ಹೇರೂರ ಅವರ ೬೭ನೇ ಹುಟ್ಟುಹಬ್ಬ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಠ್ಠಲ ಹೇರೂರ ಅವರು ಬದುಕಿನುದಕ್ಕೂ ಶೋಷಿತ , ಹಿಂದುಳಿದ ಸಮಾಜದ ಅಭಿವೃದ್ಧಿಗಾಗಿ ಸದಾ ಅವರನ್ನು ಒಗ್ಗೂಡಿಸುವ ಕಾರ್ಯವನ್ನು ಮಾಡಿದರು. ಹಿಂದುಳಿದ ವರ್ಗಗಳ ಸಮುದಾಯವನ್ನು ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಮುಂದೆ ಬರಲು ಸಂಘಟನೆಯ ಕಿಚ್ಚನ್ನು ಹಚ್ಚಿದ ಸಮಾಜದ ಮೊಟ್ಟಮೊದಲ ನಾಯಕರು. ಜೀವನದ ಕೊನೆಯ ಗಳಿಗೆಯಲ್ಲೂ ಕಬ್ಬಲಿಗ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್.ಟಿ ) ಸೇರಿಸಬೇಕೆಂಬ ಆಶಾಭಾವನೆ ವಿಠ್ಠಲ ಹೇರೂರ ಅವರ ಬದುಕಿನ ಕೊನೆಯ ಮಾತಾಗಿತ್ತು. ಅವರ ಕೊನೆಯ ಆಸೆಯನ್ನು ನೇರವೇರಿಸಬೇಕಾದರೆ ಸಮಾಜದ ಸಂಘಟಿತರಾಗಿ ಹೋರಾಟ ಮಾಡುವ ಅವಶ್ಯಕತೆಯಿದೆ ಎಂದು ಹೇಳಿದರು.
ಕೋಲಿ ಸಮಾಜದ ಅಧ್ಯಕ್ಷ ಶಿವಕುಮಾರ ತಳವಾರ, ಸಿದ್ದು ಖಣದಾಳ, ರವಿ ಸಣತಮ್, ಮರಲಿಂಗ್ ಗಂಗಭೋ, ಚಂದು ಬೊಚಮನಿ, ಬಾಬು ಹಿಪ್ಪರಗಿ, ರಾಜು ನಿಂಗಭೋ, ನಾಗು ಮಣ್ಣೂರ ಇತರರು ಎದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…