ಶಹಾಪುರದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪರಣೆ

0
148

ಶಹಾಪುರ: ಶ್ರೀ ಮಣಿಕಂಠನ್ ಅಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಹಾಪುರದ ಬಸವೇಶ್ವರ ವೃತ್ತದಲ್ಲಿ ಕೋರೊನೊ ಸೋಂಕು ನಿವಾರಕ ದ್ರಾವಣ ಸಿಂಪರಣೆಯ ಸುರಂಗ ಮಾರ್ಗವನ್ನು ಶಹಾಪುರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಉದ್ಘಾಟಿಸಿದರು.

ಶ್ರೀ ಅಮ್ಮ ಮಣಿಕಂಠನ್ ಚಾರಿಟೇಬಲ್ ಟ್ರಸ್ಟ್ ನಿಂದ ವಿನೂತನ ಶೈಲಿಯ ಸಾಮಾಜಿಕ ಸೇವೆ ಸಲ್ಲಿಸುತ್ತಾ ಬಂದಿದೆ ಇದರ ಸೇವೆ ಅಮೋಘವಾದದ್ದು ಎಂದು ಹೇಳಿದರು. ಇದರ ಸದುಪಯೋಗವನ್ನು ಶಹಾಪುರ ಜನತೆ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಅಮ್ಮ ಮಣಿಕಂಠನ್ ಚಾರಿಟಿ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಗುರು ಮಣಿಕಂಠನ್,ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಸಿದ್ದಲಿಂಗಣ್ಣ ಆನೆಗುಂದಿ, ಕರವೇ ಮುಖಂಡ ಶ್ರೀ ಶರಣು ಬಿ ಗದ್ದುಗೆ,ರಾಜು ಆನೆಗುಂದಿ,ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್ ಗುತ್ತೇದಾರ್, ರುದ್ರಪ್ಪ ಚಟ್ರಿಕಿ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here