ಕಲಬರುಗಿ: ಮನುಕುಲಕ್ಕೆ ಕಂಟಕವಾಗಿರುವ ಕೂರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ರೋಗದ ಕುರಿತು ಜಾಗೃತಿ ಮೂಡಿಸುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವರ್ಗದವರು ಪೌರಕಾರ್ಮಿಕರು ಮತ್ತು ಪೊಲೀಸ್ ಇಲಾಖೆಯವರು ಹಾಗೂ ಮಾಧ್ಯಮದವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ರೇವಣಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಸರ್ಮಥ ಗೃಹ ಉದ್ಯೋಗ ಸಂಸ್ಥೆ ವತಿಯಿಂದ ಕಲಬರುಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಪೋಲಿಸ್ ಸಿಬ್ಬಂದಿವರಿಗೆ ಆಯೋಜಿಸಿದ ಬೆಳಗಿನ ಉಪಹಾರ ವಿತರಣೆ ಮಾಡಿ ಮಾತಾನಾಡಿದ ಅವರು ಇಡೀ ವಿಶ್ವವೇ ಈ ವೈರಸ್ಗೆ ತತ್ತರಿಸಿ ಹೋಗಿದೆ ರೋಗ ಹತೋಟಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರ್ಹನಶಿ ಶ್ರಮಿಸುತ್ತಿವೆ ಸರ್ಕಾರ ಸೂಚಿಸಿದ ಮಾರ್ಗ ಸೂಚಿಸುವಂತೆ ಜನತೆ ತುರ್ತು ಸಂದರ್ಭಗಳಲ್ಲಿ ಹೊರಗಡೆ ಓಡಾಡುವುದನ್ನು ಬಿಟ್ಟು ಮನೆಯಲ್ಲಿಯೇ ಇರಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಹೇಳಿದರು
ಮನೆ ಮಠ ಬಿಟ್ಟು ನಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವರ್ಗದವರ ಪೌರ ಕಾರ್ಮಿಕರ ಪೋಲಿಸ್ ಸಿಬ್ಬಂದಿಗಳು ಮತ್ತು ಮಾಧ್ಯಮದವರ ಸೇವೆ ಸಮಾಜ ಎಂದಿಗೂ ಮರೆಯುವುದಿಲ್ಲ ಎಂದು ಪೂಜ್ಯರು ಹೇಳಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಅನ್ನಪೂರ್ಣ ಆರ್. ಸಂಗೋಳಗಿ.ರಾಚಣ್ಣಾ ಸಂಗಳೋಗಿ. ನಾಗಲಿಂಗಯ್ಯ ಮಠಪತಿ. ಸುರೇಶ ತಂಗಾ.ನಾಗರಾಜ ಸುತಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…