ಸುರಪುರ: ಕೊರೊನಾ ಸೊಂಕು ನಿರ್ಮೂಲನೆಗಾಗಿ ಸರಕಾರಗಳು ಘೋಷಣೆ ಮಾಡಿರುವ ಲಾಕ್ಡೌನ್ ಕಾರಣದಿಂದ ಇಂದು ಅನೇಕ ಬಡ ಕುಟುಂಬಗಳು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವ ಮೂಲಕ ಬೀದಿಗೆ ಬಿದ್ದಿವೆ.ಇಂತಹ ಬಡ ಕುಟುಂಬಗಳಿಗೆ ನೆರವಾಗುವುದು ಎಲ್ಲರ ಕರ್ತವ್ಯ ಎಂದು ಭಾವಿಸಿ ನಮ್ಮ ಬೈರಿಮರಡಿ ಗ್ರಾಮದಲ್ಲಿನ ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ವೆಂಕಟೇಶ ನಾಯಕ ಮಾತನಾಡಿದರು.
ಬೈರಿಮರಡಿಯಲ್ಲಿನ ಇಪ್ಪತ್ತಕ್ಕೂ ಹೆಚ್ಚಿನ ಬಡ ಕುಟುಂಬಗಳಿಗೆ ಅಕ್ಕಿ ಬೇಳೆ ಅಡುಗೆ ಎಣ್ಣೆ ಸೇರಿದಂತೆ ಅನೇಕ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿ,ಇಂದು ಜನರ ಕಷ್ಟವನ್ನು ಕಂಡು ಬಡ ನಿರ್ಗತಿಕ ಮತ್ತು ವಲಸಿಗ ಕುಟುಂಬಗಳಿಗೆ ಆಹಾರ ಧಾನ್ಯ ಮತ್ತಿತರೆ ವಸ್ತುಗಳನ್ನು ನಿತ್ಯವು ಅನೇಕ ಸಂಘ ಸಂಸ್ಥೆಗಳು ವಿತರಿಸುವ ಮೂಲಕ ತಮ್ಮ ಕರ್ತವ್ಯ ಮೆರೆಯುತ್ತಿರುವುದು ಶ್ಲಾಘನಿಯ ಸಂಗತಿಯಾಗಿದೆ.ಅದರಂತೆ ಇಂದು ನಾವುಕೂಡ ಬಡವರ ಸೇವೆಯ ಒಂದಿಷ್ಟು ಅಳಿಲು ಸೇವೆ ಸಲ್ಲಿಸುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಾದ ದ್ಯಾವಮ್ಮ ಸವಳಪಟ್ಟಿ,ಗ್ರಾ.ಪಂ ಸದಸ್ಯರಾದ ಮಲ್ಲರಡ್ಡಿ ಬನ್ನೆಟ್ಟಿ ಮುಖಂಡರಾದ ಮಾಳಪ್ಪ ಬನ್ನೆಟ್ಟಿ,ಹೊನ್ನಪ್ಪ ಸವಳಪಟ್ಟಿ,ಅಶೋಕ ನಾಯಕ,ರವಿ.ಡಿ.ನಾಯಕ,ಬಲಭೀಮ ಬೊಮ್ನಳ್ಳಿ,ಬಲಭೀಮ ಬಾದ್ಯಾಪುರ,ಲಚಮಣ್ಣ ಬನ್ನೆಟ್ಟಿ,ದ್ಯಾವಪ್ಪ ಹೆಮ್ಮಡಗಿ,ದೇವಪ್ಪ ಬನ್ನೆಟ್ಟಿ,ಶ್ರೀನಿವಾಸ ವಡ್ಡರ,ನಿಂಗಪ್ಪ ಹುಂಡೇಕಲ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…