ಶಹಾಬಾದ: ನಗರದಲ್ಲಿ ತಹಸೀಲ್ದಾರ ಸುರೇಶ ವರ್ಮಾ ನೇತೃತ್ವದಲ್ಲಿ ಕೋವಿಡ್-೧೯ ವೈರಸ್ ಹರಡುವುದನ್ನು ತಡೆಗಟ್ಟುವಿಕೆಗಾಗಿ ಮತ್ತು ಲಾಕ್ಡೌನ್ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಹೋಬಳಿವಾರು ಸೆಕ್ಟರ್ ಮೆಜಿಸ್ಟ್ರೇಟ್ ನೇಮಕ ಮಾಡುವ ಸಭೆ ನಡೆಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಶಹಾಬಾದ ನಗರ ಸೆಕ್ಟರ್ ಮೆಜಿಸ್ಟ್ರೇಟ್ ಅಧಿಕಾರಿಯಾಗಿ ನಗರಸಭೆಯ ಪೌರಾಯುಕ್ತ ವೆಂಕಟೇಶ ಅವರನ್ನು ನೇಮಕ ಮಾಡಿದ್ದು, ಇವರ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಬಸಪ್ಪ, ಸಿಡಿಪಿಓ ಇಲಾಖೆಯ ಜಗನ್ನಾಥರೆಡ್ಡಿ, ನಗರಸಭೆಯ ಸಿಬ್ಬಂದಿ ರಾಜೇಶ ಇರಲಿದ್ದಾರೆ. ಅಲ್ಲದೇ ಶಹಾಬಾದ ಗ್ರಾಮೀಣ ವಲಯದಸೆಕ್ಟರ್ ಮೆಜಿಸ್ಟ್ರೇಟ್ ಅಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನೀಲಗಂಗಾ, ಅವರನ್ನು ನೇಮಕ ಮಾಡಿದ್ದು, ಇವರ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಶಂಕರಗೌಡ, ಸಿಡಿಪಿಓ ಇಲಾಖೆಯ ಸಾಯಬಣ್ಣ ಹಾಗೂ ಪಶು ಆರೋಗ್ಯ ಕೇಂದ್ರದ ಸಿಬ್ಬಂದಿ ಭೀಮರಾವ ಇರಲಿದ್ದಾರೆ. ಈ ಇಬ್ಬರ ತಂಡ ಕೋವಿಡ್-೧೯ ವೈರಸ್ ಹರಡುವುದನ್ನು ತಡೆಗಟ್ಟುವಿಕೆಗಾಗಿ ಮತ್ತು ಲಾಕ್ಡೌನ್ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸಾಕಷ್ಟು ಶ್ರಮವಹಿಸಬೇಕು. ಅಲ್ಲದೇ ಸಾರ್ವಜನಿಕರು ಹೊರಬರದಂತೆ ಜಾಗೃತಿ ಮೂಡಿಸಬೇಕು. ಲಾಕ್ಡೌನ್ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುವ ಎಲ್ಲಾ ಅಧಿಕಾರ ಹೊಂದಿದ್ದು, ಮುಲಾಇಲ್ಲದೇ ಕ್ರಮಕೈಗೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಬುರಗಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನೀಲಗಂಗಾ.ಎಸ್.ಬಬಲಾದ, ನಗರಸಭೆಯ ಪೌರಾಯುಕ್ತ ವೆಂಕಟೇಶ, ತಾಪಂ ಇಓ ಲಕ್ಷ್ಮಣ ಶೃಂಗೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…