ಬಿಸಿ ಬಿಸಿ ಸುದ್ದಿ

ಕೋವಿಡ್-19 ತಡೆಗೆ ಹೋಬಳಿವಾರು ಸೆಕ್ಟರ್ ಮೆಜಿಸ್ಟ್ರೇಟ್ ನೇಮಕ: ತಹಸೀಲ್ದಾರ ಸುರೇಶ್ ವರ್ಮಾ

ಶಹಾಬಾದ: ನಗರದಲ್ಲಿ ತಹಸೀಲ್ದಾರ ಸುರೇಶ ವರ್ಮಾ ನೇತೃತ್ವದಲ್ಲಿ ಕೋವಿಡ್-೧೯ ವೈರಸ್ ಹರಡುವುದನ್ನು ತಡೆಗಟ್ಟುವಿಕೆಗಾಗಿ ಮತ್ತು ಲಾಕ್‌ಡೌನ್ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಹೋಬಳಿವಾರು ಸೆಕ್ಟರ್ ಮೆಜಿಸ್ಟ್ರೇಟ್ ನೇಮಕ ಮಾಡುವ ಸಭೆ ನಡೆಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಶಹಾಬಾದ ನಗರ ಸೆಕ್ಟರ್ ಮೆಜಿಸ್ಟ್ರೇಟ್ ಅಧಿಕಾರಿಯಾಗಿ ನಗರಸಭೆಯ ಪೌರಾಯುಕ್ತ ವೆಂಕಟೇಶ ಅವರನ್ನು ನೇಮಕ ಮಾಡಿದ್ದು, ಇವರ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಬಸಪ್ಪ, ಸಿಡಿಪಿಓ ಇಲಾಖೆಯ ಜಗನ್ನಾಥರೆಡ್ಡಿ, ನಗರಸಭೆಯ ಸಿಬ್ಬಂದಿ ರಾಜೇಶ ಇರಲಿದ್ದಾರೆ. ಅಲ್ಲದೇ ಶಹಾಬಾದ ಗ್ರಾಮೀಣ ವಲಯದಸೆಕ್ಟರ್ ಮೆಜಿಸ್ಟ್ರೇಟ್ ಅಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನೀಲಗಂಗಾ, ಅವರನ್ನು ನೇಮಕ ಮಾಡಿದ್ದು, ಇವರ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಶಂಕರಗೌಡ, ಸಿಡಿಪಿಓ ಇಲಾಖೆಯ ಸಾಯಬಣ್ಣ ಹಾಗೂ ಪಶು ಆರೋಗ್ಯ ಕೇಂದ್ರದ ಸಿಬ್ಬಂದಿ ಭೀಮರಾವ ಇರಲಿದ್ದಾರೆ. ಈ ಇಬ್ಬರ ತಂಡ ಕೋವಿಡ್-೧೯ ವೈರಸ್ ಹರಡುವುದನ್ನು ತಡೆಗಟ್ಟುವಿಕೆಗಾಗಿ ಮತ್ತು ಲಾಕ್‌ಡೌನ್ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸಾಕಷ್ಟು ಶ್ರಮವಹಿಸಬೇಕು. ಅಲ್ಲದೇ ಸಾರ್ವಜನಿಕರು ಹೊರಬರದಂತೆ ಜಾಗೃತಿ ಮೂಡಿಸಬೇಕು. ಲಾಕ್‌ಡೌನ್ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುವ ಎಲ್ಲಾ ಅಧಿಕಾರ ಹೊಂದಿದ್ದು, ಮುಲಾಇಲ್ಲದೇ ಕ್ರಮಕೈಗೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಲಬುರಗಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನೀಲಗಂಗಾ.ಎಸ್.ಬಬಲಾದ, ನಗರಸಭೆಯ ಪೌರಾಯುಕ್ತ ವೆಂಕಟೇಶ, ತಾಪಂ ಇಓ ಲಕ್ಷ್ಮಣ ಶೃಂಗೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

7 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

8 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

8 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

8 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

9 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

9 hours ago