ಹೆಚ್ಚಿಗೆ ಹಣ ಪಡೆದು, ಕಡಿಮೆ ಆಹಾರ ಧಾನ್ಯ ವಿತರಿಸುವ ಪಡಿತರ ಅಂಗಡಿ ಅಮಾನತ್ತು

0
116

ಕಲಬುರಗಿ: 5 ಪಡಿತರ ಅಂಗಡಿ ಅಮಾನತ್ತು: ಹೆಚ್ಚಿಗೆ ಹಣ ಪಡೆದು ಅಥವಾ ಕಡಿಮೆ ಪ್ರಮಾಣದಲ್ಲಿ ಆಹಾರ ಧಾನ್ಯ ವಿತರಣೆ ಮಾಡುತ್ತ ಪಡಿತರದಾರರಿಗೆ ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂಬ ಶಾಸಕರ ಅರೋಪದ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ಸಾವಳೇಶ್ವರ, ಹಿತ್ತಲಶಿರೂರ ಮತ್ತು ವಾಗ್ಧರಿ, ಜೇವರ್ಗಿ ತಾಲೂಕಿನ ಶಾಖಾಪುರ ಎಸ್.ಎ ಹಾಗೂ ಕಲಬುರಗಿ ತಾಲೂಕಿನ ರಾಜಾಪುರ ಪಡಿತರ ಅಂಗಡಿಗಳನ್ನು ತಕ್ಷಣವೆ ಅಮಾನತ್ತು ಮಾಡಿ ಅಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಪಡಿತರ ವಿತರಣೆಗೆ ಕ್ರಮ ವಹಿಸಬೇಕು ಎಂದು ಡಿ.ಸಿಎಂ. ಗೋವಿಂದ ಕಾರಜೋಳ ಅವರು ಆಹಾರ ಇಲಾಖೆಯ ಜಂಟಿ ನಿರ್ದೇಶಕ ಡಿ.ಎಂ.ಪಾಣಿ ಅವರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ಜಿಲ್ಲೆಯಲ್ಲಿ ಇದೂವರೆಗೆ 10 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಇದರಲ್ಲಿ ಇಬ್ಬರು ನಿಧನ ಹೊಂದಿದ್ದರೆ ಎರಡು ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 4 ಮತ್ತು ಶಹಾಬಾದ ಪಟ್ಟಣದಲ್ಲಿ 1 ಕಂಟೇನ್‍ಮೆಂಟ್ ಝೋನ್ ಎಂದು ಘೋಷಿಸಿ ಅಲ್ಲಿ ಸ್ಕ್ರೀನಿಂಗ್, ಮುನ್ನೆಚರಿಕೆ ಕ್ರಮಗಳು ಕೈಗೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನಿಂದ 28320 ಮತು ಹೊರ ರಾಜ್ಯ ಮತ್ತು ಹೊರ ದೇಶದಿಂದ ಜಿಲ್ಲೆಗೆ 31518 ಜನ ಮರಳಿದ್ದು, ಅವರೆಲ್ಲರ ಮೇಲೆ ನಿಗಾ ಇರಿಸಿದೆ ಎಂದ ಸಭೆಗೆ ಮಾಹಿತಿ ನೀಡಿದರು.

Contact Your\'s Advertisement; 9902492681

ಐಸೋಲೇಷನ್ ವಾರ್ಡ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗಳ ರಕ್ಷಣೆಗಾಗಿ 5000 ಪಿ.ಪಿ.ಇ.ಕಿಟ್, 37000 ಎನ್-95 ಮಾಸ್ಕ್ ಲಭ್ಯವಿದ್ದು, ವೈದ್ಯ ಸಿಬ್ಬಂದಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿದೆ. ಇ.ಎಸ್.ಐ.ಸಿ.ನಲ್ಲಿ 360 ಮತ್ತು ಜಿಮ್ಸ್ ನಲ್ಲಿ 330 ಐಸೋಲೆಷನ್ ಬೆಡ್ ಸ್ಥಾಪಿಸಲಾಗಿದೆ. ಇದಲ್ಲದೆ ಕಲಬುರಗಿಯ್ಲಲಿ 4 ಫೀವರ್ ಕ್ಲಿನಿಕ್ ಸ್ಥಾಪಿಸಲಾಗಿದೆ. ಸರ್ಕಾರದ ಸೂಚನೆ ಪಾಲಿಸದೆ ಕೋವಿಡ್-19 ಶಂಕಿತರನ್ನು ಚಿಕಿತ್ಸೆ ನೀಡಿದ ಕಲಬುರಗಿ ನಗರದ ಬಹಮನಿ ಆಸ್ಪತ್ರೆ ಮತ್ತು ಸ್ಟಾರ್ ಆಸ್ಪತ್ರೆಯನ್ನು ಸೀಲ್ ಮಾಡಲಾಗಿ, ಅವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದೆ. ಜಿಮ್ಸ್ ಮತ್ತು ಇ.ಎಸ್.ಯ.ಸಿ. ಆಸ್ಪತ್ರೆಯನ್ನು ಕೋವಿಡ್-19 ರೋಗಿಗಳಿಗೆ ಮೀಸಲಿರಿಸಿದೆ. ಕಲಬುರಗಿ ಪ್ರಯೋಗಾಲಯದಲ್ಲಿ ಪ್ರತಿನಿತ್ಯ 60 ಜನರ ಸ್ಯಾಂಪಲ್ಸ್‍ಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಶಾಸಕರಾದ ಸುಭಾಷ ಗುತ್ತೇದಾರ್, ಎಂ.ವೈ. ಪಾಟೀಲ, ಬಸವರಾಜ ಮತ್ತಿಮೂಡ, ಕನೀಜ್ ಪಾತಿಮಾ, ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ತಿಪ್ಪಣಪ್ಪ ಕಮಕನೂರ, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here