ಬಿಸಿ ಬಿಸಿ ಸುದ್ದಿ

ಹೆಚ್ಚಿಗೆ ಹಣ ಪಡೆದು, ಕಡಿಮೆ ಆಹಾರ ಧಾನ್ಯ ವಿತರಿಸುವ ಪಡಿತರ ಅಂಗಡಿ ಅಮಾನತ್ತು

ಕಲಬುರಗಿ: 5 ಪಡಿತರ ಅಂಗಡಿ ಅಮಾನತ್ತು: ಹೆಚ್ಚಿಗೆ ಹಣ ಪಡೆದು ಅಥವಾ ಕಡಿಮೆ ಪ್ರಮಾಣದಲ್ಲಿ ಆಹಾರ ಧಾನ್ಯ ವಿತರಣೆ ಮಾಡುತ್ತ ಪಡಿತರದಾರರಿಗೆ ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂಬ ಶಾಸಕರ ಅರೋಪದ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ಸಾವಳೇಶ್ವರ, ಹಿತ್ತಲಶಿರೂರ ಮತ್ತು ವಾಗ್ಧರಿ, ಜೇವರ್ಗಿ ತಾಲೂಕಿನ ಶಾಖಾಪುರ ಎಸ್.ಎ ಹಾಗೂ ಕಲಬುರಗಿ ತಾಲೂಕಿನ ರಾಜಾಪುರ ಪಡಿತರ ಅಂಗಡಿಗಳನ್ನು ತಕ್ಷಣವೆ ಅಮಾನತ್ತು ಮಾಡಿ ಅಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಪಡಿತರ ವಿತರಣೆಗೆ ಕ್ರಮ ವಹಿಸಬೇಕು ಎಂದು ಡಿ.ಸಿಎಂ. ಗೋವಿಂದ ಕಾರಜೋಳ ಅವರು ಆಹಾರ ಇಲಾಖೆಯ ಜಂಟಿ ನಿರ್ದೇಶಕ ಡಿ.ಎಂ.ಪಾಣಿ ಅವರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ಜಿಲ್ಲೆಯಲ್ಲಿ ಇದೂವರೆಗೆ 10 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಇದರಲ್ಲಿ ಇಬ್ಬರು ನಿಧನ ಹೊಂದಿದ್ದರೆ ಎರಡು ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 4 ಮತ್ತು ಶಹಾಬಾದ ಪಟ್ಟಣದಲ್ಲಿ 1 ಕಂಟೇನ್‍ಮೆಂಟ್ ಝೋನ್ ಎಂದು ಘೋಷಿಸಿ ಅಲ್ಲಿ ಸ್ಕ್ರೀನಿಂಗ್, ಮುನ್ನೆಚರಿಕೆ ಕ್ರಮಗಳು ಕೈಗೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನಿಂದ 28320 ಮತು ಹೊರ ರಾಜ್ಯ ಮತ್ತು ಹೊರ ದೇಶದಿಂದ ಜಿಲ್ಲೆಗೆ 31518 ಜನ ಮರಳಿದ್ದು, ಅವರೆಲ್ಲರ ಮೇಲೆ ನಿಗಾ ಇರಿಸಿದೆ ಎಂದ ಸಭೆಗೆ ಮಾಹಿತಿ ನೀಡಿದರು.

ಐಸೋಲೇಷನ್ ವಾರ್ಡ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗಳ ರಕ್ಷಣೆಗಾಗಿ 5000 ಪಿ.ಪಿ.ಇ.ಕಿಟ್, 37000 ಎನ್-95 ಮಾಸ್ಕ್ ಲಭ್ಯವಿದ್ದು, ವೈದ್ಯ ಸಿಬ್ಬಂದಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿದೆ. ಇ.ಎಸ್.ಐ.ಸಿ.ನಲ್ಲಿ 360 ಮತ್ತು ಜಿಮ್ಸ್ ನಲ್ಲಿ 330 ಐಸೋಲೆಷನ್ ಬೆಡ್ ಸ್ಥಾಪಿಸಲಾಗಿದೆ. ಇದಲ್ಲದೆ ಕಲಬುರಗಿಯ್ಲಲಿ 4 ಫೀವರ್ ಕ್ಲಿನಿಕ್ ಸ್ಥಾಪಿಸಲಾಗಿದೆ. ಸರ್ಕಾರದ ಸೂಚನೆ ಪಾಲಿಸದೆ ಕೋವಿಡ್-19 ಶಂಕಿತರನ್ನು ಚಿಕಿತ್ಸೆ ನೀಡಿದ ಕಲಬುರಗಿ ನಗರದ ಬಹಮನಿ ಆಸ್ಪತ್ರೆ ಮತ್ತು ಸ್ಟಾರ್ ಆಸ್ಪತ್ರೆಯನ್ನು ಸೀಲ್ ಮಾಡಲಾಗಿ, ಅವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದೆ. ಜಿಮ್ಸ್ ಮತ್ತು ಇ.ಎಸ್.ಯ.ಸಿ. ಆಸ್ಪತ್ರೆಯನ್ನು ಕೋವಿಡ್-19 ರೋಗಿಗಳಿಗೆ ಮೀಸಲಿರಿಸಿದೆ. ಕಲಬುರಗಿ ಪ್ರಯೋಗಾಲಯದಲ್ಲಿ ಪ್ರತಿನಿತ್ಯ 60 ಜನರ ಸ್ಯಾಂಪಲ್ಸ್‍ಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಶಾಸಕರಾದ ಸುಭಾಷ ಗುತ್ತೇದಾರ್, ಎಂ.ವೈ. ಪಾಟೀಲ, ಬಸವರಾಜ ಮತ್ತಿಮೂಡ, ಕನೀಜ್ ಪಾತಿಮಾ, ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ತಿಪ್ಪಣಪ್ಪ ಕಮಕನೂರ, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

5 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

5 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

5 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

5 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

5 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

5 hours ago