ಬಿಸಿ ಬಿಸಿ ಸುದ್ದಿ

ಕೊರೊನಾ ಎಫೆಕ್ಟ್: ಕ್ರೈಸ್ ಬಾಂಧವರಿಂದ ಸರಳ ರೀತಿಯಲ್ಲಿ ಈಸ್ಟರ್ ಸಂಡೆ ಆಚರಣೆ

ಸುರಪುರ: ಕ್ರಿಶ್ಚಿಯನ್ ಸಮುದಾಯದವ ಅತ್ಯಂತ ಪವಿತ್ರ ಹಬ್ಬವಾದ ಶುಭ ಶುಕ್ರವಾರ (ಗುಡ್ ಫ್ರೈಡೆ) ಹಾಗೂ ರವಿವಾರದಂದು ಯೇಸುಕ್ರಿಸ್ತರ ಪುನರುತ್ಥಾನ ದಿನಾಚರಣೆ (ಈಸ್ಟರ್ ಸಂಡೇ) ಗಳನ್ನು ಕೋರೋನಾ ವೈರಸ್ ಸೋಂಕು ತಡೆಯಲು ಲಾಕಡೌನ್ ನಿಮಿತ್ತ ತಮ್ಮ ತಮ್ಮ ಮನೆಗಳಲ್ಲಿ ಅತ್ಯಂತ ಸರಳವಾಗಿ ಆಚರಿಸಿದರು.

ಕೋರೊನಾ ವೈರಸ್ ಸೋಂಕು ಹರಡದಂತೆ ಸರಕಾರ ಲಾಕಡೌನ್ ಜಾರಿಗೊಳಿಸಿ ಸಾಮೂಹಿಕ ಪ್ರಾರ್ಥನೆ ಕೈಗೊಳ್ಳದಂತೆ ನಿಷೇಧಿಸಿರುವದರಿಂದ ಸಮಾಜದ ಧರ್ಮ ಗುರುಗಳು ಕೂಡಾ ಚರ್ಚಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸದೇ ತಮ್ಮ ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಆದೇಶ ಹೊರಡಿಸಿದ್ದರು.

ಬಿಷಪ್ ಎನ್.ಎಲ್.ಕರ್ಕರೆ ಬೆಂಗಳೂರು ಅವರು ಅವರು ವಿಡಿಯೋ ಕಾನಫೆರೆನ್ಸ್ ಮೂಲಕ ಸಮಾಜದ ಬಾಂಧವರಿಗೆ ಸಂದೇಶವನ್ನು ನೀಡಿದರು, ಯೇಸುಕ್ರಿಸ್ತರು ಹೇಳಿರುವಂತೆ ಶಾಂತಿಯನ್ನು ನಿಮಗೆ ಬಿಟ್ಟು ಹೋಗುತ್ತೇನೆ ನನ್ನಲಿರುವಂತಹ ಶಾಂತಿಯನ್ನು ನಿಮಗೆ ಕೊಡುತ್ತೇನೆ ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ ಎಂದು ಈಸ್ಟರ್ ಸಂದೇಶವನ್ನು ನೀಡಿದರು, ಇಡೀ ಜಗತ್ತನ್ನು ಕೋರೋನಾ ವೈರಸ್ ಸೋಂಕಿನ ಭೀತಿಯನ್ನು ಎದುರಿಸುತ್ತಿದ್ದು ಈ ಭೀತಿಯನ್ನು ಹೋಗಲಾಡಿಸಲು ಎಲ್ಲರೂ ಪ್ರಾರ್ಥನೆ ಸಲ್ಲಿಸೋಣ ಎಂದು ಹೇಳಿದರು.

ನಗರದ ಸಾಮ್ಯುವೇಲ್ ಮ್ಯಾಥ್ಯೂ ಶಿಕ್ಷಕರು ಸೇರಿದಂತೆ ಕ್ರಿಶ್ಚಿಯನ್ ಸಮಾಜದ ಬಾಂಧವರ ಮನೆಗಳಲ್ಲಿ ಯೇಸುಕ್ರಿಸ್ತರ ಪುನರುತ್ಥಾನ ದಿನವನ್ನು ಕಾಂಡಲ್ ದೀಪಗಳನ್ನು ಬೆಳಗಿಸಿ ಆರಾಧನೆ ಹಾಡುಗಳು, ನಂತರ ಬೈಬಲ್ ಪಾರಾಯಣ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

emedialine

Recent Posts

ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲರ ನುಡಿಮುತ್ತುಗಳು ಜೀವನದಲ್ಲಿ ಅಳವಡಿಸಿಕೊಳ್ಳಿ

ಕಲಬುರಗಿ: ನಗರದ ಜಸ್ಟಿಸ್ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಮತ್ತು ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಶ್ರಾವಣ…

16 hours ago

ಛಾಯಾಚಿತ್ರ ಪ್ರದರ್ಶನ ಭಾಷೆಯಷ್ಟೇ ಪ್ರಬಲ ಮಾಧ್ಯಮ

ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ…

16 hours ago

ಕಲಬುರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು 29 ರಂದು: ಸರ್ವಾಧ್ಯಕ್ಷೆ ಲೇಖಕಿ ಪ್ರಮೀಳಾ ಜಾನಪ್ಪಗೌಡಗೆ ಸನ್ಮಾನ

ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ…

16 hours ago

18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಡಿ.ಸಿ.ಮನವಿ

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ…

17 hours ago

ನಾಳೆ ಕಲಬುರಗಿಗೆ ಉಪ ಮುಖ್ಯಮಂತ್ರಿ ಆಗಮನ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…

17 hours ago

ಪ್ರಜ್ವಲ್‍ಗೆ ಸನ್ಮಾನ

ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420