ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿದ ನಾಯಕ ಡಾ. ಬಾಬಾ ಸಹೇಬ: ಮಲ್ಲೇಶಿ ಸಜ್ಜನ್

0
51

ಶಹಾಬಾದ: ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈe್ಞÁನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ. ಬಿ.ಆರ್.ಅಂಬೇಡ್ಕರ್ ಎಂದು ದಲಿತ ಮುಖಂಡ ಮಲ್ಲೇಶಿ ಸಜ್ಜನ್ ಹೇಳಿದರು.

ಅವರು ಮಂಗಳವಾರ ನಗರದ ಶಹಾಬಾದ ಪತ್ತಿನ ಸಹಕಾರ ಸಂಘದಲ್ಲಿ ಆಯೋಜಿಸಲಾದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾತಂತ್ರ್ಯ ಮತ್ತು ಸಮಾನತೆ ಎಲ್ಲಾ ವರ್ಗದವರ ಸ್ವತ್ತಾಗಿದ್ದು, ಅದನ್ನು ಎಲ್ಲರೂ ಸಮಾನವಾಗಿ ಪಡೆದುಕೊಂಡಾಗ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ. ಎಲ್ಲಾ ಸಮುದಾಯದಲ್ಲಿ ಸಾಮರಸ್ಯ, ಸೌಹಾರ್ದತೆ ಮೂಡುತ್ತದೆ. ಡಾ. ಬಿ.ಆರ್.ಅಂಬೇಡ್ಕರ್‍ರವರ ತತ್ವ ಆದರ್ಶಗಳನ್ನು ಜನಸಾಮಾನ್ಯರು ತಮ್ಮ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

Contact Your\'s Advertisement; 9902492681

ಬಿಜೆಪಿ ನಗರಾಧ್ಯಕ್ಷ ಅಣವೀರ ಇಂಗಿನಶೆಟ್ಟಿ ಪೂಜೆ ಸಲ್ಲಿಸಿದರು. ಶಹಾಬಾದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್, ಉಪಾಧ್ಯಕ್ಷ ಶಿವಾನಂದ ಪಾಟೀಲ, ಡಾ.ಅಹ್ಮದ್ ಪಟೇಲ್, ಲೋಹಿತ್ ಕಟ್ಟಿ, ಸುರೇಶ ಮೆಂಗನ್, ಸದಾನಂದ ಕುಂಬಾರ, ಡಿ.ಸಿ.ಹೊಸಮನಿ, ಭೀಮಣ್ನ ಖಂಡ್ರೆ, ರಾಜೇಶ ಯನಗುಂಟಿಕರ್, ರಾಜ್‍ಮಹ್ಮದ್ ರಾಜಾ,ಭರತ್ ಧನ್ನಾ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here