ಕಲಬುರಗಿ: ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ಕೆಳಕಂಡ ದಿನಾಂಕಗಳಂದು ಪ್ರತಿದಿನ ಬೆಳಗಿನ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಕಲಬುರಗಿ ಎಸಿಬಿ ಪೊಲೀಸ್ ಠಾಣಾ ಮಟ್ಟದ ಜನಸಂಪರ್ಕ ಸಭೆಗಳನ್ನು ನಡೆಸಲಿದ್ದಾರೆ ಎಸಿಬಿ ಪೊಲೀಸ್ ಠಾಣೆಯ ಅರಕ್ಷಕ ಉಪಾಧೀಕ್ಷಕರಾದ ಸುಧಾ ಆದಿ ಅವರು ತಿಳಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಮಹ್ಮದ ಇಸ್ಮಾಯಿಲ್ (ಮೊಬೈಲ್ ಸಂಖ್ಯೆ 9480806309) ಅವರು ಮೇ 17 ರಂದು ಶಹಾಬಾದ ತಾಲೂಕು ಪ್ರವಾಸಿ ಮಂದಿರದಲ್ಲಿ, ಮೇ 18 ರಂದು ಕಮಲಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಾಗೂ ಮೇ 20 ರಂದು ಯಡ್ರಾಮಿ ತಾಲೂಕು ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸುವರು.
ಪೊಲೀಸ್ ಇನ್ಸ್ಪೆಕ್ಟರ್ ಕಷ್ಣಪ್ಪ ಕಲ್ಲದೇವರು (ಮೊಬೈಲ್ ಸಂಖ್ಯೆ 9480806310) ಅವರು ಮೇ 22 ರಂದು ಸೇಡಂ ತಾಲೂಕು ಪ್ರವಾಸಿ ಮಂದಿರದಲ್ಲಿ, ಮೇ 24 ರಂದು ಆಳಂದ ತಾಲೂಕು ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 25 ರಂದು ಅಫಜಲಪುರ ತಾಲೂಕು ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸುವರು.
ಈ ಹಿಂದೆ ಆಯಾ ತಾಲೂಕುಗಳಲ್ಲಿ ಜನಸಂಪರ್ಕ ಸಭೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಎಸಿಬಿ ಅಧಿಕಾರಿಗಳು ಠಾಣಾ ಗುನ್ನೆ ನಂ. 02/2019 ಮತ್ತು 03/2019ರನ್ವಯ ತನಿಖೆ ಕಾರ್ಯದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಜನಸಂಪರ್ಕ ಸಭೆ ನಡೆಸಿರುವುದಿಲ್ಲ. ಅದರಂತೆ ಮೇಲ್ಕಂಡ ಜನಸಂಪರ್ಕ ಸಭೆಯ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…