ಚಿಂಚೋಳಿ ಕ್ಷೇತ್ರದ ಮತದಾನ ಸರಕಾರ ಬದಲಿಸುತ್ತದೆ: ಮಾಜಿ ಸಚಿವ ಅರವಿಂದ್ ಲಿಂಬಾವಳಿ

0
90

ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದಲ್ಲಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಕೊಡ್ಲ ಗ್ರಾಮದಲ್ಲಿ ಮಾತನಾಡುತ್ತಾ ಕೇಂದ್ರದಲ್ಲಿ ಮೋದಿ ಸರ್ಕಾರ ಮತ್ತೊಮ್ಮೆ ಬರುವುದು ನಿಶ್ಚಿತ ಅಲ್ಲದೆ ಬಹಳಷ್ಟು ಬಡವರಿಗಾಗಿ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ ಅದೇ ರೀತಿ ಇಲ್ಲಿ ಉಪಚುನಾವಣೆಯಲ್ಲಿ ತಮ್ಮ ಒಂದು ಮತದಾನ ರಾಜ್ಯದ ಸರ್ಕಾರ ಬದಲಾಯಿಸುತ್ತದೆ ರಾಜ್ಯದಲ್ಲಿ ಮತ್ತೊಮ್ಮೆ ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ.

ಅವರು ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಚಿಂಚೋಳಿ ಮತ್ತು  ಕಂದಗೋಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರ ಗೆಲ್ಲುತ್ತೇವೆ ಹೀಗಾಗಿ ನಮ್ಮ ಸಮಾಜದ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ತಮ್ಮ ಅಮೂಲ್ಯವಾದ ಮತ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾದವ್ ಅವರಿಗೆ ನೀಡಬೇಕಾಗಿ ವಿನಂತಿಸಿದ್ದಾರೆ.

Contact Your\'s Advertisement; 9902492681

ಅವಿನಾಶ್ ಜಾಧವ್ ಗೆದ್ದರೆ ನಮ್ಮ ಸಮಾಜದ ಸುನಿಲ್ ವಲ್ಯಪೂರ್ ವಿಧಾನಪರಿಷತ್ ಸದಸ್ಯರಾಗಲಿದ್ದಾರೆ ಸರ್ಕಾರ ಬಂದರೆ ನಾನು ಮಂತ್ರಿಯಾಗುತ್ತಾನೆ ಹೀಗಾಗಿ ತಮ್ಮ ಮತ ಬಿಜೆಪಿಗೆ ಹಾಕಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಂತರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ಚುನಾವಣೆ ಉಸ್ತುವಾರಿ ಎನ್ ರವಿಕುಮಾರ್ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾದವ್ ರವರ ಪರವಾಗಿ ಚಿಮ್ಮಂಚೋಡ್ ಗ್ರಾಮದಲ್ಲಿ ರೂಟ್ ಶೋದ ನಡೆಸಿ, ಮತಯಾಚನೆ ನಡೆಸಿದರು. ಶಾಸಕರಾದ ಬಸವರಾಜ್ ಮತ್ತಿಮೂಡ್ ಉಮೇಶ್ ಜಾಧವ್ , ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here