ಬಿಸಿ ಬಿಸಿ ಸುದ್ದಿ

ಮೇ 23 ರಂದು ಸುಗಮವಾಗಿ ಮತ ಎಣಿಕೆ ನಡೆಸಬೇಕು: ವೆಂಕಟೇಶ್ ಕುಮಾರ್

ಕಲಬುರಗಿ: ಗುಲಬರ್ಗಾ ಮೀಸಲು (ಎಸ್.ಸಿ) ಲೋಕಸಭಾ ಕ್ಷೇತ್ರ ಮತ್ತು ಚಿಂಚೋಳಿ ಮೀಸಲು (ಎಸ್.ಸಿ) ವಿಧಾನಸಭಾ ಉಪಚುನಾವಣೆಯ ಮತಎಣಿಕೆ ಇದೇ ಮೇ ೨೩ ರಂದು ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಮತಎಣಿಕೆ ಕಾರ್ಯವನ್ನು ಸುಗಮವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಅಂದು ಸರಿಯಾದ ಸಮಯಕ್ಕೆ ತಮ್ಮನ್ನು ನಿಯೋಜಿಸಿರುವ ಆಯಾ ವಿಧಾನಸಭಾವಾರು ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಅವರು ಮತ ಎಣಿಕೆ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಕಲಬುರಗಿ ನಗರದ ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಮತ ಎಣಿಕೆ ದಿನದಂದು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಮತ ಎಣಿಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಮತ ಎಣಿಕೆಯ ದಿನದಂದು ವಿವಿಯ ಮುಖ್ಯದ್ವಾರದಲ್ಲಿ ರ‍್ಯಾಂಡಮೈಸೇಷನ್ (ಯಾದೃಚ್ಛೀಕರಣ) ಮಾಡಲ್ಪಟ್ಟಿರುವ ಚುನಾವಣಾ ಸಿಬ್ಬಂದಿಯ ಪಟ್ಟಿಯನ್ನು ಮುಂಜಾನೆ ೫.೩೦ಕ್ಕೆ ಫಲಕದಲ್ಲಿ ಪ್ರದರ್ಶಿಸಲಾಗುವುದು. ಈ ಸಂಬಂಧ ಅಂದು ಬೆಳಿಗ್ಗೆ ಎಲ್ಲರ ಮೊಬೈಲ್‌ಗಳಿಗೆ ಸಂದೇಶಗಳು ಕೂಡ ಬರಲಿವೆ. ಸಿಬ್ಬಂದಿ ಮುಂಜಾನೆ ವಿವಿ ಮುಖ್ಯದ್ವಾರದ ಬಳಿ ೬ ಗಂಟೆಗೆ ಆಗಮಿಸಿ, ತಮ್ಮನ್ನು ಯಾವ ಮತ ಎಣಿಕೆ ಕೇಂದ್ರಕ್ಕೆ ನಿಯೋಜಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಬಳಿಕ ಮುಖ್ಯದ್ವಾರದಿಂದ ಆಯಾ ಮತ ಎಣಿಕೆ ಕೇಂದ್ರಕ್ಕೆ ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಅದರಲ್ಲಿ ತೆರಳಬೇಕು. ನಂತರ ಆಯಾ ಮತ ಎಣಿಕೆ ಕೇಂದ್ರ (ವಿಧಾನಸಭಾವಾರು)ದ ಸಹಾಯಕ ಚುನಾವಣಾಧಿಕಾರಿಗಳ ಬಳಿ ವರದಿ ಮಾಡಿಕೊಂಡು, ರ‍್ಯಾಂಡಮೈಸೇಷನ್ ಮಾಡಲ್ಪಟ್ಟ ಟೇಬಲ್‌ಗಳಿಗೆ ಹೋಗಿ ಆಸಿನರಾಗಬೇಕು ಎಂದರು.

ಲೋಕಸಭೆಯ ಪ್ರತಿ ವಿಧಾನಸಭಾ ಮತ ಎಣಿಕೆ ಕೇಂದ್ರಕ್ಕೆ ೫ ರಿಂದ ೧೦ ಮಂದಿ ಕಾಯ್ದಿರಿಸಿದ (ಹೆಚ್ಚುವರಿ) ಸಿಬ್ಬಂದಿ ನಿಯೋಜಿಸಲಾಗುತ್ತಿದ್ದು, ಮತ ಎಣಿಕೆ ಪ್ರಕ್ರಿಯೆ ಮುಗಿಯುವವರೆಗೂ ಕಡ್ಡಾಯವಾಗಿ ಕೇಂದ್ರದಲ್ಲೇ ಇರಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರತಿ ಸುತ್ತು ಮತ ಎಣಿಕೆ ಕುರಿತ ಪತ್ರಗಳಿಗೆ ಆಯಾ ಟೇಬಲ್ ಏಜೆಂಟರ ಸಹಿ ಕಡ್ಡಾಯವಾಗಿ ಮಾಡಿಸಬೇಕು. ಇಲ್ಲದಿದ್ದರೆ ಮುಂದೆ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷಗಳು ಆಕ್ಷೇಪಣೆ ಸಲ್ಲಿಸಬಹುದು. ಹಾಗಾಗಿ ತಪ್ಪದೇ ಸಹಿ ಮಾಡಿಸಿಕೊಳ್ಳಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು. ಈ ಬಾರಿ ಪ್ರತಿ ವಿಧಾನಸಭಾ ಕ್ಷೇತ್ರದ ೫ ವಿವಿಪ್ಯಾಟ್‌ಗಳ ಸ್ಲಿಪ್ ಎಣಿಕೆ ಸಹ ಮಾಡಬೇಕಾಗಿರುವುದರಿಂದ ಯಾವುದೇ ಗೊಂದಲವಾಗದಂತೆ ಎಣಿಸಬೇಕು. ಪ್ರತಿಬಾರಿ ೧೨.೩೦ರ ವರೆಗೆ ಫಲಿತಾಂಶ ಹೊರಬೀಳುತ್ತಿತ್ತು. ಈ ಬಾರಿ ವಿವಿಪ್ಯಾಟ್‌ಗಳ ಸ್ಲಿಪ್ ಮತ ಎಣಿಕೆಯಿಂದಾಗಿ ಮಧ್ಯಾಹ್ನ ೩ ಅಥವಾ ೪ ಗಂಟೆಗೆ ಫಲಿತಾಂಶ ಬರಬಹುದು ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್ ಅವರು ಮಾತನಾಡಿ, ವಿವಿಯ ಪರೀಕ್ಷಾ ವಿಭಾಗದ ಹಾಲ್‌ನಲ್ಲಿ ಚಿತ್ತಾಪುರ, ಗುಲ್ಬರ್ಗಾ ಗ್ರಾಮೀಣ ಹಾಗೂ ಜೇವರ್ಗಿ ವಿಧಾನಸಭಾ ಕ್ಷೇತ್ರ, ಒಳಾಂಗಣ ಕ್ರೀಡಾಂಗಣದಲ್ಲಿ ಗುಲ್ಬರ್ಗಾ ಉತ್ತರ ಮತ್ತು ಗುರುಮಠಕಲ್ ಮತಕ್ಷೇತ್ರ, ಗಣಿತಶಾಸ್ತ್ರ ವಿಭಾಗದದಲ್ಲಿ ಅಫಜಲಪುರ ಹಾಗೂ ಸಸ್ಯಶಾಸ್ತ್ರ ವಿಭಾಗದಲ್ಲಿ ಗುಲ್ಬರ್ಗಾ ದಕ್ಷಿಣ ಮತಕ್ಷೇತ್ರ, ಕನ್ನಡ ಅಧ್ಯಯನ ಕೇಂದ್ರ ಸಭಾಂಗಣ(ನೆಲಮಹಡಿ) ಸೇಡಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿವೆ. ಹಾಗೆಯೇ ಕನ್ನಡ ಅಧ್ಯಯನ ಕೇಂದ್ರ ಸಭಾಂಗಣದ ಮೊದಲ ಮಹಡಿಯಲ್ಲಿ ಚಿಂಚೋಳಿ ವಿಧಾನಸಭಾ ಉಪಚುನಾವಣೆಯ ಮತಗಳ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.

ಮತಎಣಿಕಾ ಕಾರ್ಯಕ್ಕೆ ನೀಡಿರುವ ಗುರುತಿನ ಪತ್ರದ ಜೊತೆಗೆ ಸಿಬ್ಬಂದಿಗಳು ತಮ್ಮದೊಂದು ಯಾವುದಾದರೂ ಗುರುತಿನ ಪತ್ರ ಜೊತೆಯಲ್ಲಿ ತರಬೇಕು ಎಂದು ಅವರು ತಿಳಿಸಿದರು. ಚುನಾವಣೆಗೆ ಸಂಬಂಧಿಸಿದ ಪ್ರತಿಯೊಂದು ಸಣ್ಣ ಸೂಚನೆಯನ್ನು ಮಹತ್ವವಾಗಿ ಪರಿಗಣಿಸಬೇಕು. ಹಾಗಾದಲ್ಲಿ ಮಾತ್ರ ಮತಎಣಿಕೆ ಕಾರ್ಯ ಯಶಸ್ವಿಯಾಗಲಿದೆ ಎಂದು ಅವರು ಹೇಳಿದರು. ಸೇಡಂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಶಶಿಶೇಖರ್ ರೆಡ್ಡಿ ಅವರು, ಮತ ಎಣಿಕೆ ದಿನದಂದು ಚುನಾವಣಾ ಸಿಬ್ಬಂದಿಯ ಕರ್ತವ್ಯಗಳು, ಮತಎಣಿಕಾ ಯಂತ್ರಗಳ ನಿರ್ವಹಣೆ, ವಿವಿ ಪ್ಯಾಟ್ ಮತಗಳ ಎಣಿಕೆ ಮುಂತಾದವುಗಳ ಕುರಿತು ವಿವರವಾಗಿ ತರಬೇತಿ ನೀಡಿದರು.

ಚಿಂಚೋಳಿ ಮೀಸಲು (ಎಸ್.ಸಿ) ವಿಧಾನಸಭಾ ಉಪಚುನಾವಣೆಗೆ ನೇಮಕವಾಗಿರುವ ಸಾಮಾನ್ಯ ವೀಕ್ಷಕ ಬಿ.ರಾಮರಾವ್, ಉಪ ಚುನಾವಣೆಯ ಚುನಾವಣಾಧಿಕಾರಿ ಸೋಮಶೇಖರ್ ಎಸ್.ಜಿ, ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಶೋಕ್ ದುಡಗುಂಟಿ, ವೆಬ್ ಕ್ಯಾಸ್ಟಿಂಗ್ ಮತ್ತು ಮೈಕ್ರೋ ಅಬ್ಸರ್ವರ್ ನೋಡಲ್ ಅಧಿಕಾರಿ ಕೆ. ರಾಮೇಶ್ವರಪ್ಪ, ಎನ್‌ಐಸಿ ಕೇಂದ್ರದ ಅಧಿಕಾರಿ ಸುಧಿಂದ್ರ ಅವಧಾನಿ, ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರರು ಹಾಜರಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420