ಮುಸ್ಲೀಂ ಕೌನ್ಸಿಲ್ ಸಂಘದ ಕಚೇರಿಯಲ್ಲಿ ಅಂಬೇಡ್ಕರರ ೧೨೯ನೇ ಜಯಂತಿ ಆಚರಣೆ

ಸುರಪುರ: ನಗರದ ಖುರೇಶಿ ಮೊಹಲ್ಲಾದಲ್ಲಿರುವ ಮುಸ್ಲೀಂ ಕೌನ್ಸಿಲ್ ಸಂಘದ ತಾಲೂಕು ಕಚೇರಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ೧೨೯ನೇ ಜಯಂತಿಯನ್ನು ಅಚರಿಸಲಾಯಿತು.ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಬಾಬಾ ಸಾಹೇಬ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಖಾಜಾ ಜಮೀರ್ ಖುರೇಶಿ ಮಾತನಾಡಿ, ಭಾರತ ಸ್ವಾತಂತ್ರ್ಯದ ನಂತರ ದೇಶದ ಆಡಳಿತಕ್ಕೆ ಯಾವುದೆ ಮಾರ್ಗಸೂಚಿಗಳಿಲ್ಲದ ಸಂದರ್ಭದಲ್ಲಿ ಜಗತ್ತಿನ ಅನೇಕ ರಾಷ್ಟ್ರಗಳ ಸಂವಿಧಾನ ಓದಿ ನಂತರ ಜಗತ್ತೆ ಮೆಚ್ಚುವಂತ ಮಹಾನ್ ಸಂವಿಧಾವನ್ನು ಬರೆದು ಕೊಟ್ಟ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದೇಶದ ಪ್ರತಿಯೊಬ್ಬರು ನೆನೆಯುವುದು ಅವಶ್ಯವಾಗಿದೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಪಟೇಲ್ ಮಾತನಾಡಿ,ದೇಶದಲ್ಲಿ ಕೊರೊನಾ ವೈರಸ್ ಭೀತಿಯಿಂದಾಗಿ ಇಮದು ಬಾಬಾ ಸಾಹೇಬರ ಜಯಂತಿಯನ್ನು ಸರಳವಾಗಿ ಆರಿಸಲಾಗುತ್ತಿದ್ದು,ನಾವೆಲ್ಲರು ಸರಕಾರದ ಆದೇಶವಾದ ಲಾಕ್‌ಡೌನ್ ಪಾಲಿಸುವ ಮೂಲಕ ಅಂಬೇಡ್ಕರರ ಜಯಂತಿಗೆ ಗೌರವ ಸಲ್ಲಿಸೋಣ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರಮೀಜ್ ರಾಜಾ,ಅಂಬೇಡ್ಕರ್ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್,ಭಡೆಸಾ ಹರೂನ್,ಇಬ್ರಾಹಿಂ ಆಸಿಫ್ ಮಹಿಬೂಬ ಇತರರಿದ್ದರು.

ವಿವಿಧೆಡೆ ಅಂಬೇಡ್ಕರ ಜಯಂತಿ: ತಾಲೂಕಿನ ಬಿಜಾಸಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ ನಾಮಫಲಕಕ್ಕೆ ಪುಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಜಯಂತಿ ಆಚರಿಸಲಾಯಿತು.ಅದೇರೀತಿಯಾಗಿ ನಗರದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಸತಿ ನಿಲಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ ಅವರ ೧೨೯ನೇ ಜಯಂತಿ ಆಚರಿಸಲಾಯಿತು.ರತ್ತಾಲ ಗ್ರಾಮದಲ್ಲಿ ಅಂಬೇಡ್ಕರರ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ,ಮಕ್ಕಳಿಗೆ ಸಿಹಿ ಹಂಚಿ ಜಯಂತಿ ಆಚರಿಸಲಾಯಿತು.

ದೇವಾಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿನ ನಾಮಫಲಕಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಜಯಂತಿ ಆಚರಿಸಿದರು.ಮಂಗಳೂರು ಗ್ರಾಮದಲ್ಲಿ ಅಂಬೇಡ್ಕರರ ನಾಮಫಲಕಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಆಚರಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420