ಕಲಬುರಗಿ: ಮನುಷ್ಯನಿಗೆ ಮನುಷ್ಯನ ರಕ್ತವನ್ನೇ ನೀಡಬೇಕು ಆದರೆ, ಅನೇಕರಿಗೆ ರಕ್ತದಾನ ಮಾಡಲು ಆಸಕ್ತಿ ಇಲ್ಲ. ಲಕ್ಷಾಂತರ ಮಂದಿ ರಕ್ತಸ್ರಾವದಿಂದಾಗಿ ಜೀವ ಉಳಿಸಿಕೊಳ್ಳಲು ಜೀವನ್ಮರಣ ಹೋರಾಟ ನಡೆಸುತ್ತಾರೆ. ಇಂತಹ ಸಂದರ್ಭದಲ್ಲಿ ರಕ್ತದಾನ ಮಾಡಿ ಜೀವ ಉಳಿಸಬೇಕು ಎಂದು ಸಂಚಾರಿ ಪೊಲೀಸ್ ಅಧಿಕಾರಿ ರಮೇಶಕುಮಾರ ಕಾಂಬಳೆ ಅವರು ಸಲಹೆ ನೀಡಿದರು.
ನಗರದ ನ್ಯೂ ಘಾಟಗೆ ಲೇಔಟ್ನ ಬುದ್ಧ ವಿಹಾರದ ಆವರಣದಲ್ಲಿ ರಿಪಬ್ಲೀಕನ್ ಯೂತ್ ಫೆಡ್ರೇಷನ್ ವತಿಯಿಂದ ಹಮ್ಮಿಕೊಂಡ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ೧೨೯ನೇ ಜಯಂತಿ ಪ್ರಯುಕ್ತ ಉಚಿತ ರಕ್ತದಾನ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಿಪಬ್ಲೀಕನ್ ಯೂತ್ ಫೆಡ್ರೇಷನ್ ಸಂಘಟನೆಯ ಸಂಚಾಲಕ ಹನುಮಂತ ಇಟಗಿ ಅವರು ಮಾತನಾಡಿ, ರಕ್ತದ ಬಗ್ಗೆ ಜಾಗೃತಿ ಇಲ್ಲದ ಕಾರಣ ರಕ್ತದಾನ ಮಾಡುವುದಕ್ಕೆ ಯಾರು ಮುಂದೆ ಬರುತ್ತಿಲ್ಲ. ಇದರಿಂದ ರಕ್ತ ಸಂಗ್ರಹ ಕಡಿಮೆಯಾಗುತ್ತಿದೆ. ಆದರೆ ದೇಶದಲ್ಲಿ ರಕ್ತದ ಕೊರತೆಯಿಂದ ಲಕ್ಷಾಂತರ ಜನರು ಆಸ್ಪತ್ರೆಯಲ್ಲೇ ಮೃತಪಡುತ್ತಿದ್ದಾರೆ. ಹೀಗಾಗಿ ರಕ್ತದಾನ ಮಾಡುವುದು ಪುಣ್ಯದ ಕೆಲಸವಾಗಿದೆ ಎಂದು ಅವರು ಹೇಳಿದರು.
ಅಶೋಕ ಕಪನೂರ, ತ್ಯಾಗರಾಜ ಸಾಗರ, ಸಾಯಿ ಕಪನೂರ, ಸಿದ್ಧಾರ್ಥ ವಾರೆ, ವಿದ್ಯಾಸಾಗರ ಬಬಲಾದ, ಸತೀಶ ಕಲಕೇರಿ, ಸಾತಪ್ಪ ಭಜಂತ್ರಿ, ರಾಘವೇಂದ್ರ ಕಿರಸಾವಳಗಿ, ಸುನೀಲ ಕಟ್ಟಿಮನಿ, ದಿಲೀಪ, ಕಿರಣ ಮೊರೆ, ಶ್ರೀನಿವಾಸ ಕಾಂಬಳೆ ಸೇರಿದಂತೆ ಮುಂತಾದವರು ಉಚಿತ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಸಂಘರಾಜ ವಾಲಿಕರ್, ಸಂಚಾಲಕ ಹನುಮಂತ ಇಟಗಿ, ಕಾರ್ಯಾಧ್ಯಕ್ಷ ಸಂತೋಷ ಮೇಲ್ಮನಿ, ನಾಗೇಂದ್ರ ಜವಳಿ, ನಗರಾಧ್ಯಕ್ಷ ಶೀವಕುಮಾರ ಜಾಲವಾದ, ಡಾ.ಅನೀಲ್ ಟೆಂಗಳಿ, ಬಾಲಾಜಿ ಜೆ. ಚಿತ್ತೇಕರ್, ಅನೀಲ್ ದೇವರಮನಿ, ಅಂಬರೀಶ್ ಅಂಬಲಗಿ, ರಾಣು ಮುದ್ದನಕರ್, ವಿಘ್ನೇಶ್ವರ ಟೈಗರ್, ಶಶಿ ಆಲೂರ್ಕರ್, ಅರುಣಕುಮಾರ ಗಡ್ಡದ, ವಿದ್ಯಾಸಾಗರ ಬಬಲಾದಕರ್, ಚಿದಾನಂದ ಕುಡ್ಡನ್, ಸಿದ್ಧಾರ್ಥ ಪಾರೆ, ರಮೇಶ ಹಾಗರಗಿ, ಮಹೇಶ ನವಲಗಿರಿ, ಮಯೂರ್ ವಾಘಮೋರೆ, ರುಕ್ಕೆಶ್ ಬಚ್ಚನ್, ಅನೀಲ ಸಾಜರೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ.ಪಿ.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…
ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…
ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…
ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…
ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…
ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…