ಸುರಪುರ: ನಗರದಲ್ಲಿ ಕೊರೊನಾ ಸೊಂಕಿನ ಕುರಿತು ಸರಿಯಾದ ಜಾಗೃತಿ ಕಾರ್ಯಕ್ರಮ ನಡೆಯದೆ ಜನತೆ ಗೊಂದಲದಲ್ಲಿದ್ದಾರೆ,ಅಲ್ಲದೆ ಕೊರೊನಾ ಭೀತಿಯಿಂದ ಬಡ ಜನರು ಮನೆಯಿಂದ ಹೊರಗೆ ಬಾರದೆ ಇರುವುದರಿಂದ ಅವರಿಗೆ ದುಡಿಯಲು ಕೆಲಸವಿಲ್ಲದೆ ಜೀವನ ನಡೆಸಲು ತೊಂದರೆಯಾಗುತ್ತಿದೆ ಆದ್ದರಿಂದ ಜನರಿಗೆ ಅನುಕೂಲ ಕಲ್ಪಿಸಲು ಯೊಜನೆ ರೂಪಿಸಲು ಶಾಸಕ ನರಸಿಂಹ ನಾಯಕ (ರಾಜುಗೌಡ)ರು ತಮ್ಮ ನೇತೃತ್ವದಲ್ಲಿ ಸಭೆ ಕರೆಯಲು ನಗರಸಭೆಯ ವಾರ್ಡ್ ನಂಬರ್ 20ರ ಸದಸ್ಯೆ ಲಕ್ಷ್ಮೀ ಮಲ್ಲಿಕಾರ್ಜುನ ಬಿಲ್ಲವ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರದಿಂದ ಕೇವಲ ಅಕ್ಕಿ ಗೋಧಿ ನೀಡಿದ ಮಾತ್ರಕ್ಕೆ ಜೀವನ ನಡೆಸಲಾಗದು.ಇನ್ನುಳಿದ ಪದಾರ್ಥಗಳು ಮತ್ತು ಅಗತ್ಯ ವಸ್ತುಗಳ ಪಡೆಯಲು ಹಣವಿಲ್ಲದೆ ಜನತೆ ಪರದಾಡುವಂತಾಗಿದೆ.
ಅಲ್ಲದೆ ಕೊವಿಡ್-19 ಬಗ್ಗೆ ಜನರಲ್ಲಿ ಸರಿಯಾದ ಮಹಿತಿಯಿಲ್ಲ,ಇದರ ಬಗ್ಗೆ ನಗರಸಭೆಯಾಗಲಿ ತಾಲೂಕು ಆಡಳಿತವಾಗಲಿ ಸರಿಯಾದ ಜಾಗೃತಿಯನ್ನೂ ಮೂಡಿಸುತ್ತಿಲ್ಲ.ಆದ್ದರಿಂದ ತಮ್ಮ ನೇತೃತ್ವದಲ್ಲಿ ನಗರಸಭೆಯ ಅಧಿಕಾರಿಗಳು ಮತ್ತು ನಗರಸಭೆಯ ಸದಸ್ಯರ ಸಭೆಯನ್ನು ಕರೆದು ಕೊರೊನಾ ವೈರಸ್ ಜಾಗೃತಿ ಕಾರ್ಯಕ್ರಮ ರೂಪಿಸುವ ಬಗ್ಗೆ ಯೊಜನೆಯನ್ನು ಮಾಡಲು ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…