ರಾವೂರ ರಥೋತ್ಸವದಲ್ಲಿ ಭಾಗಿಯಾದ 150 ಜನರ ಮೇಲೆ ಕಾನೂನು ಕ್ರಮ: ಎಸ್ಪಿ

0
153

ಕಲಬುರಗಿ: ಕೊರೊನ್ ವೈರಸ್ ಹಿನ್ನಲೆ ಸರ್ಕಾರ ಲಾಕ್ ಡೌನ್ ಹಾಗೂ ನಿಷೇದಾಜ್ಞೆ ಜಾರಿಯ ನಡುವೆ ರಾವೂರ ಗ್ರಾಮದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ನಡೆದ ರಥೋತ್ಸವದಲ್ಲಿ ಭಾಗಿಯಾದ 150 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಈಗ ಸದ್ಯಕ್ಕೆ ಐದು ಜನರನ್ನು ವಶಕ್ಕೆ ತೆಗೆದುಕೊಂಡಿದ್ದು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಲಬುರಗಿ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರು.

ಚಿತ್ತಾಪುರ ತಾಲೂಕಿನ ರಾವೂರ, ವಾಡಿ ಪಟ್ಟಣ ಸೇರಿದಂತೆ ಭಾಗೋಡಿ, ಗ್ರಾಮಗಳಲ್ಲಿನ ಹೋಮ್ ಕ್ವಾರಂಟೈನ್ ನಲ್ಲಿ ಇರುವ ಜನರ ಮನೆಗಳಿಗೆ ಭೇಟಿ ನೀಡಿ ಪಟ್ಟಣದ ಪ್ರವಾಸಿ ಮಂದಿರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಲಾಕ್ ಡೌನ್ ಉಲ್ಲಂಘಿಸಿ ರಾವೂರನಲ್ಲಿ ಗುರುವಾರ ನಡೆದ ರಥೋತ್ಸವದಲ್ಲಿ ಭಾಗಿಯಾದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.

Contact Your\'s Advertisement; 9902492681

ತಾಲೂಕಿನಲ್ಲಿ ಕಿರಾಣಿ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವರ ವಿರುದ್ಧ ಯಾರಾದರೂ ದೂರು ಕೊಟ್ಟರೆ ಅವರ ಮೇಲೆ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ, ಮತ್ತು ಮರಳು ದಂಧೆ ನಮ್ಮ ಗಮನಕ್ಕೆ ಬಂದರೆ ಅವರ ಮೇಲೆ ಕೇಸ್ ದಾಖಲು ಮಾಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್ ಉಮಾಕಾಂತ್ ಹಳ್ಳೆ, ತಾಲೂಕು ಪಂಚಾಯತ್ ಇಓ ಅನಿತಾ ಪೂಜಾರಿ, ಡಿವೈಎಸ್ಪಿ ವೆಂಕನಗೌಡ ಪಾಟೀಲ್, ಸಿಪಿಐ ಪಂಚಾಕ್ಷರಿ ಸಾಲಿಮಠ್, ಪಿಎಸ್ಐ ಶ್ರೀಶೈಲ್ ಅಂಬಾಟಿ, ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here