ದರ್ಗಾಕ್ಕೆ ಲಾಕ್: ಜಾಗೃತಿ ಮೂಡಿಸಿದ ಶ್ರೀಧರ್

0
75

ಚಿತ್ತಾಪುರ: ಮಹಾಮಾರಿ ಕೊರೊನ್ ವೈರಸ್ ನಿಯಂತ್ರಣಕ್ಕಾಗಿ ಜನರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು

ಸರ್ಕಾರದ ಸೂಚನೆಯನ್ನು ಉಲ್ಲಂಘಿಸಿ ತಾಲೂಕಿನ ವಾಚ್ಚ ಗ್ರಾಮದ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಮಾಡುವುದು ಗಮನಕ್ಕೆ ಬಂದ ತಕ್ಷಣವೇ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಶ್ರೀಧರ್ ಗ್ರಾಮದ ದರ್ಗಾಕ್ಕೆ ಭೇಟಿ ನೀಡಿ ಮುಸ್ಲಿಂ ಬಾಂಧವರಲ್ಲಿ ಕಳಕಳಿಯಿಂದ ಮಾತನಾಡಿ ನಾವು ನೀವು ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಸರ್ಕಾರದ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಮತ್ತು ಮಾಸ್ಕ್ ಬಳಸಿ ಸಾಮೂಹಿಕ ಪ್ರಾರ್ಥನೆ ಮಾಡದೆ ನಿಮ್ಮ ನಿಮ್ಮ ಮನೆಗಳಲ್ಲಿ ಪ್ರಾರ್ಥನೆ ಮಾಡಿ ಎಂದು ಜಾಗೃತಿ ಮೂಡಿಸಿದರು.

Contact Your\'s Advertisement; 9902492681

ಪೊಲೀಸರ ಸಹಾಯದೊಂದಿಗೆ ಸರ್ಕಾರದ ನಿಯಮದ ಪ್ರಕಾರ ದರ್ಗಾಕ್ಕೆ ಲಾಕ್ ಮಾಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here