ಶಹಾಬಾದ: ಬಿಸಿಲಿನ ತಾಪಕ್ಕೆ ಕಾದ ತಾಲೂಕಿನ ಹಲವೆಡೆ ಶುಕ್ರವಾರ ಸಂಜೆ ವೇಳೆಗೆ ಗುಡುಗು ಮಿಂಚು ಸಹಿತ ಮಳೆಯಾಗಿದ್ದು, ಗಿಡ, ವಿದ್ಯುತ್ ಕಂಬಗಳು ಬಿದ್ದಿದ್ದು, ಒಂದು ಮನೆ ಕುಸಿದಿದೆ. ಕರೊನಾ ಹರಡುವ ಭೀತಿಯಿಂದ ಕಳೆದ ಸುಮಾರು ಇಪ್ಪತ್ತು ದಿನಗಳಿಂದ ಮನೆಯಲ್ಲೇ ಬಂದಿಯಾಗಿರುವ ಜನತೆ ಬಿಸಿಲಿನ ತಾಪಕ್ಕೆ ಬೆಂಡಾಗಿದ್ದರು.
ಶುಕ್ರವಾರ ಸುರಿದ ಮಳೆಯಿಂದ ತಾಲೂಕಿನಲ್ಲಿ ಗುಡುಗು ಸಹಿತ ಸುಮಾರು ಅರ್ಧ ಗಂಟೆ ಮಳೆಗೆ ಇಳೆ ತಂಪಾಗಿದೆ.
ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.ಗಾಳಿ ಸಹಿತ ಮಳೆಗೆ ಅಲಸ್ಟಾಂ ಕಾಲೋನಿಯಲ್ಲಿ ಮರಗಳು ಉರುಳಿವೆ.ಅಲ್ಲದೇ ಮರಗಳ ಟೊಂಗೆಗಳು ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಿದ್ಯುತ್ ಕಡಿತವಾಗಿತ್ತು.
ನಗರದ ರಾಮಾ ಮೊಹಲ್ಲಾ ಪ್ರದೇಶದಲ್ಲಿ ಮರವೊಂದು ಬಿದ್ದಿದ್ದ ಪರಿಣಾಮ ನಾಲ್ಕು ವಿದ್ಯುತ್ ಕಂಬಗಳು ಧರೆಗೆ ಉಳಿದಿವೆ, ಜೆಸ್ಕಾಂ ಸಿಬ್ಬಂದಿ ಜನರು ಗುಂಪಾಗಿ ಹೊರ ಬರಬಾರದೆಂದು ಎಚ್ಚರಿಸಿ, ಜನರನ್ನು ಚದುರಿಸಿ, ವಿದ್ಯುತ್ ಕಂಬಗಳ ದುರಸ್ತಿಗೆ ಕ್ರಮ ಕೈಗೊಂಡರು. ಇದರಿಂದ ನಗರದಲ್ಲಿ ಸಂಪೂರ್ಣ ವಿದ್ಯುತ್ ವ್ಯತ್ಯಯ ಉಂಟಾಯಿತು.
ನಗರದ ಪಠಾಣಗಲ್ಲಿ ಪ್ರದೇಶದಲ್ಲಿ ಮಳೆಯಿಂದ ಚರಂಡಿ ತುಂಬಿ ಸುಮಾರ 10 ಮನೆಗಳಿಗೆ ನೀರು ನುಗ್ಗಿದ್ದು, ಕೆಲ ಮನೆಗಳ ಮುಂದೆ ಭಾರಿ ನೀರು ನಿಂತಿದ್ದರಿಂದ ಮನೆಯಿಂದ ಹೊರ ಬರಲಾಗುತ್ತಿಲ್ಲ.
ಇಂದಿರಾ ನಗರ ಮಡ್ಡಿ-2 ರ ಕಾಳನೂರ ಓಣಿ ಪ್ರದೇಶದಲ್ಲಿ ಮಳೆ ವಿಕಲಚೇತನ್ ಶಂಕರ ಎಂಬುವವರ ಮನೆಯ ಗೋಡೆ ಕುಸಿದಿದ್ದರಿಂದ ಮನೆ ಛಾವಣಿ ಸ್ವಲ್ಪ ಮಟ್ಟಿಗೆ ಬಿದ್ದಿದೆ.
ಜೆಪಿ ಕಾಲೋನಿಯ ಕಾಶಪ್ಪ ಎಂಬುವವರ ಮನೆಯ ಮೇಲೆ ಮರವೊಂದು ಬಿದ್ದಿದ್ದರ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…