ಕಲಬುರಗಿ: ಲಾಕ್ಡೌನ್ ಉಲ್ಲಂಘಿಸಿ ಗುರುವಾರ ಏಪ್ರಿಲ್ 16 ರಂದು ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ದೇವರ ದೇವಸ್ಥಾನದ ಮಠದ ಜಾತ್ರಾ ಮಹೋತ್ಸವ ಜರುಗಿಸಿದ ಹಿನ್ನೆಲೆಯಲ್ಲಿ ಸದರಿ ದೇವಸ್ಥಾನದ ಮಠದ 20 ಜನ ಹಾಗೂ 150 ರಿಂದ 200 ಗ್ರಾಮಸ್ಥರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಕೊರೋನಾ ಹರಡದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಈಗಾಗಲೇ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ಕಲಂ ಜಾರಿಯಲ್ಲಿದ್ದು, ಯಾವುದೇ ರೀತಿಯ ಜನ ಸಮೂಹ ಹಾಗೂ ಜಾತ್ರೆ ನಡೆಸುವುದನ್ನು ನಿಷೇಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಜಾತ್ರೆಯನ್ನು ರದ್ದುಗೊಳಿಸುವುದಾಗಿ ಲಿಖಿತವಾಗಿ ಹೇಳಿಕೆ ನೀಡಿ ತದನಂತರ ಜನಸಮೂಹವನ್ನು ಸೇರಿಸಿ ಜಾತ್ರೆ ಆಯೋಜಿಸಿದ್ದು, ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸಿದಂತಾಗಿದೆ.
ಇದೇ ಪ್ರಕರಣ ಸಂಬಂಧ ಜಾತ್ರೆಯನ್ನು ತಡೆಯುವಲ್ಲಿ ವಿಫಲರಾಗಿ ಕರ್ತವ್ಯ ಲೋಪವೆಸಗಿದ ಚಿತ್ತಾಪುರ ಗ್ರಾಮೀಣ ಹೋಬಳಿಯ ಸೆಕ್ಟ್ರಲ್ ಮೆಜಿಸ್ಟ್ರೇಟ್ ಆಗಿ ನೇಮಕ ಮಾಡಲಾದ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಜಕುಮಾರ ರಾಠೋಡ ಹಾಗೂ ವಾಡಿ ಪೊಲೀಸ್ ಠಾಣೆಯ ಪಿ.ಎಸ್.ಐ. ವಿಜಯಕುಮಾರ ಅವರನ್ನು ಗುರುವಾರದಂದೇ ಅಮಾನತ್ತುಗೊಳಿಸಲಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಸೇಡಂ ಸಹಾಯಕ ಆಯುಕ್ತರು, ಚಿತ್ತಾಪುರ ತಹಶೀಲ್ದಾರರು, ರಾವೂರ ಗ್ರಾಮ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಾರಣ ಕೇಳುವ ನೋಟೀಸು ಸಹ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…