ಶಾಸಕ ಎಂ.ವೈ. ಪಾಟೀಲರ ಕೋವಿಡ್-19 ವಿರುದ್ಧ ಕಾರ್ಯಕ್ಕೆ ಮೆಚ್ಚುಗೆ

0
112

ಕಲಬುರಗಿ: ಅಫಜಲಪುರ ಮತಕ್ಷೇತ್ರದ ಶಾಸಕ ಎಂ . ವೈ . ಪಾಟೀಲ ಅವರು ಕೋವಿಡ್ – 19 ತಡೆಗಟ್ಟಲು ಕ್ಷೇತ್ರದಾದ್ಯಂತ ಸಂಚರಿಸಿ ಜನರಲ್ಲಿ ಅರಿವು ಮೂಡಿಸುತ್ತಿರುವುದಕ್ಕೆ ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಅಸ್ಸಾಕ್ ಎಸ್. ಬಂದಠವಾಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಾಸಕ ಮತ್ತವರ ಪುತ್ರರಾದ ಜಿಲ್ಲಾ ಪಂಚಾಯತ್ ಸದಸ್ಯ
ಅರುಣಕುಮಾರ ಪಾಟೀಲ, ವೈದ್ಯ ಡಾ. ಸಂಜೀವಕುಮಾರ ಪಾಟೀಲ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಮತ್ತು ಜಿ.ಪಂ. ಸದಸ್ಯರು ಹಾಗೂ ಕಾರ್ಯಕರ್ತರು ತಾಲ್ಲೂಕಿನಾದ್ಯಂತ ಸಂಚರಿಸಿ ದೀನ ದಲಿತರಿಗೆ, ಬಡವರು ಮತ್ತು ನಿರ್ಗತಿಕರಿಗೆ ಆಹಾರ ಸಾಮಗ್ರಿ, ಹಣ್ಣು ಹಂಪಲು, ಮಾಸ್ ಮತ್ತು ಸ್ಯಾನಿಟೈಸರ್‌ ವಿತರಿಸುವುದರ ಜೊತೆಗೆ ಕೊರೊನಾ ಸೋಂಕು ಹರಡದಂತೆ ತಡೆಯಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಲ್ಲಿ
ಜಾಗೃತಿ ಮೂಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕೆಲಸವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here