ಕಲಬುರಗಿ: ಹೊರ ರಾಜ್ಯಗಳಿಂದ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ಚೆಕ್ ಪೋಸ್ಟ್ಗಳು, ವಿಶೇಷವಾಗಿ ಸ್ಥಾಪಿಸಲಾದ ಚೆಕ್ಪೋಸ್ಟ್ಗಳು ಹಾಗೂ ಕೊರೋನಾ ವೈರೆಸ್ ಖಚಿತವಾದ ರೋಗಿಗಳ ವಾರ್ಡ್ಗಳ ಬ್ಯಾರಿಕೇಡ್ ಬಳಿ ಸಿ.ಸಿ. ಟಿ.ವಿ ಅಳವಡಿಸಲು ಕ್ರಮವಹಿಸುವಂತೆ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಅವರು ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿದರು.
ಅವರು ಶುಕ್ರವಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಭಾಂಗಣದಲ್ಲಿ ಕರೆದಿದ್ದ ನಗರದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಹೊರರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ಎಲ್ಲಾ ಚೆಕ್ ಪೋಸ್ಟ್ಗಳಿಗೆ ಇಂದು ತಾವು ದಿಢೀರ್ ಭೇಟಿ ನೀಡಿದ್ದು, ಶಹಾಬಾದ ಹಾಗೂ ಹುಮನಾಬಾದನಿಂದ ಆಗಮಿಸುವ ಚೆಕ್ ಪೋಸ್ಟಗಳು ಹೊರುತುಪಡಿಸಿ ಎಲ್ಲಾ ಚೆಕ್ ಪೋಸ್ಟಗಳು ಚುರುಕಾಗಿ ಕಾರ್ಯ ನಿರ್ವಹಿಸುತ್ತಿವೆ. ಎಲ್ಲ ಚೆಕ್ಪೋಸ್ಟಗಳಲ್ಲಿ ಸಿ.ಸಿ. ಕ್ಯಾಮರಾಗಳು ಅಳವಡಿಸಿ ಮರುದಿನ ಜಿಲ್ಲೆಗೆ ಆಗಮಿಸಿರುವ ವಾಹನಗಳು ಹಾಗೂ ವ್ಯಕ್ತಿಗಳ ಮಾಹಿತಿಗಳನ್ನು ಪರಿಶೀಲಿಸಬಹುದಾಗಿದೆ ಎಂದರು.
ದಿನೆ ದಿನೇ ಜಿಲ್ಲೆಯಲ್ಲಿ ಕೊರೋನಾ ವೈರೆಸ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಲಬುರಗಿ ಜಿಲ್ಲೆ ಈಗ ರೆಡ್ ಝೋನ್ ಆಗಿ ಪರಿವರ್ತನೆಯಾಗಿದೆ. ಇನ್ನು ಮುಂದೆ ಎಲ್ಲರೂ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಕೊರೋನಾ ವೈರೆಸ್ ತಗುಲಿದ ರೋಗಿಯ ಖಚಿತ ಮಾಹಿತಿಯನ್ನು ತ್ವರಿತವಾಗಿ ಪೊಲೀಸ್ ಇಲಾಖೆಗೆ ತಿಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಎ. ಜಬ್ಬಾರ್ ಅವರಿಗೆ ಸೂಚಿಸಿದರು. ಮಾಹಿತಿ ಪಡೆದ ಪೊಲೀಸ್ ಇಲಾಖೆಯೂ ಎರಡು ಗಂಟೆಯೊಳಗಾಗಿ ವೈರೆಸ್ ಖಚಿತವಾದ ರೋಗಿಯ ಕಾಲೋನಿಯ ಸುತ್ತಮುತ್ತ ಬ್ಯಾರಿಕೇಡ್ ಹಾಗೂ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರದ ಸದಸ್ಯರಾದ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅವರು ಮಾತನಾಡಿ ದೇಶದಲ್ಲಿ ಲಾಕ್ಡೌನ್ ಆಗುವ ಮುಂಚೆಯೇ ಕಲಬುರಗಿ ಜಿಲ್ಲೆ ಹನ್ನೆರಡು ದಿನಗಳ ಹಿಂದೆಯೇ ಲಾಕ್ಡೌನ್ ಆಗಿದೆ. ಆದರೂ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ನಮ್ಮ ಜಿಲ್ಲೆ ರೆಡ್ಝೋನ್ ಪರಿಸ್ಥಿತಿಗೆ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಜಿಲ್ಲೆಯ ಪ್ರತಿಯೊಂದು ವಾಡ್ರ್Àಗಳ ಸಣ್ಣ ಪುಟ್ಟ ರಸ್ತೆಗಳು ಸೇರಿದಂತೆ ಎಲ್ಲ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಈ ವಾರ್ಡನಿಂದ ಹೊರಗಡೆ ಹೋಗಲು ಒಂದೇ ದಾರಿಯ ವ್ಯವಸ್ಥೆ ಮಾಡಬೇಕು. ವಾರ್ಡ್ನಿಂದ ಹೊರಗಡೆ ಹೋಗುವ ಪ್ರತಿಯೊಬ್ಬ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಲು ಓರ್ವ ಪೊಲೀಸ್ ಪೇದೆ, ಮಹಾನಗರ ಪಾಲಿಕೆಯಿಂದ ಓರ್ವ ಇಂಜಿನೀಯರ್ ಹಾಗೂ ಓರ್ವ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಬೇಕೆಂದರು.
ಈ ಕುರಿತು ಒಂದು ವಾಟ್ಸ್ ಆ್ಯಪ್ ಗ್ರೂಪ್ ರಚಿಸಿಕೊಂಡು ತಂಡ ಕಾರ್ಯನಿರ್ವಹಿಸಬೇಕು. ವಾರ್ಡ್ಗಳಿಂದ ಹೊರಗಡೆ ಹೋಗುವ ಸಾರ್ವಜನಿಕರಿಗೆ ತಡೆದು ಮನೆಯಲ್ಲೆ ಇರಲು ತಿಳಿಸಿ ಅವರ ಮನೆ ವಿಳಾಸ ಪಡೆದು ಅವರಿಗೆ ಬೇಕಾಗಿರುವ ಅಗತ್ಯ ವಸ್ತುಗಳಾದ ದವಸ ಧಾನ್ಯ, ತರಕಾರಿ ಹಾಗೂ ರೋಗಿಗಳಿಗೆ ಮಾತ್ರೆ ಸೇರಿದಂತೆ ಎಲ್ಲಾ ಸೌಕರ್ಯಗಳನ್ನು ಮೂರರಿಂದ ನಾಲ್ಕು ಗಂಟೆಯೊಳಗಾಗಿ ಅವರ ಮನೆ ಬಾಗಲಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.
ಪೊಲೀಸರು ಕಾನೂನು ಪಾಲನೆಯ ಜೊತೆಗೆ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಬೀದಿನಾಟಕ, ಧ್ವನಿ ವರ್ಧಕಗಳ ಮೂಲಕ ಜಾಗೃತಿ ಮಾಡಿಸುತ್ತಿದ್ದು, ಇದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಡಾ. ಎನ್.ವಿ ಪ್ರಸಾದ, ನಗರ ಪೊಲೀಸ್ ಆಯುಕ್ತ ಸತೀಶ ಕುಮಾರ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಡಿ.ಸಿ.ಪಿ. ಕಿಶೋರ ಬಾಬು, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪಿಪಿಇ ಕಿಟ್ ನೀಡಿಕೆ: ಇದೇ ಸಂದರ್ಭದಲ್ಲಿ ಪಿಪಿಇ ಕಿಟ್ ಕಲಬುರಗಿ ರೋಟರಿ ಕ್ಲಬ್ ಅಧ್ಯಕ್ಷ ಕಿರಣಕುಮಾರ ಶೆಟ್ಟಕಾರ್ ಇವರು 10 ಪಿಪಿಇ ಕಿಟ್ ಹಾಗೂ 1000 ಮಾಸ್ಕ್ಗಳನ್ನು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೇಣಿಗೆಯಾಗಿ ನೀಡಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…