ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ಜಾತ್ರೆ ನಡೆಸಿದ ಚಿತ್ತಾಪುರ ತಾಲೂಕಿನ ರಾವೂರ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದ ಮಠಕ್ಕೆ ಶನಿವಾರ ಜಿಲ್ಲಾಧಿಕಾರಿ ಶರತ್ ಬಿ. ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದ ವಿವಿಧ ಪ್ರದೇಶಗಳಿಗೂ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನುಷ್ಠಾನವನ್ನು ಪರಾಮರ್ಶಿಸಿದರು. ಕೊರೋನಾ ಸೋಂಕು ಹರಡದಂತೆ ಮುನ್ನೆಚರಿಕೆಯಾಗಿ ಗ್ರಾಮದೊಳಗಿನ ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಸ್ಥಳದಲ್ಲಿದ್ದ ಚಿತ್ತಾಪುರ ತಹಶೀಲ್ದಾರ ಉಮಾಕಾಂತ ಅವರು ಡಿ.ಸಿ. ಅವರ ಗಮನಕ್ಕೆ ತಂದರು.
ರಾವೂರು ಜಾತ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ 20 ಜನ ಮತ್ತು ಸುಮಾರು 150-200 ಜನ ಗ್ರಾಮಸ್ಥರ ವಿರುದ್ಧ ವಾಡಿ ಠಾಣೆಯಲ್ಲಿ ಈಗಾಗಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.
ವಾಡಿ ಪಟ್ಟಣಕ್ಕೂ ಭೇಟಿ: ಪಟ್ಟಣದ ಎ.ಸಿ.ಸಿ. ಕಂಪನಿ ಗೇಟ್ ಬಳಿ ಪಿಲ್ಕಂ ಪ್ರದೇಶದ 2 ವರ್ಷದ ಗಂಡು ಮಗುವಿಗೆ ಕಳೆದ ಏಪ್ರಿಲ್ 12 ರಂದು ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕಂಟೇನ್ ಮೆಂಟ್ ಝೋನ್ ಎಂದು ಗುರುತಿಸಿದ ವಾರ್ಡ ಸಂಖ್ಯೆ 11, 12, 13 ಹಾಗೂ 14 ಪ್ರದೇಶಕ್ಕೂ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಪೂರ್ವಸಿದ್ಧತೆಯನ್ನು ಜಿಲ್ಲಾಧಿಕಾರಿ ಶರತ್ ಬಿ. ಅವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಚಿತ್ತಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅನಿತಾ ಕೆ., ಚಿತಾಪುರ್ ಸಿಪಿಐ ಪಂಚಾಕ್ಷರಿ ಸಾಲಿಮಠ, ವಾಡಿ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ಇನ್ನಿತರ ಅಧಿಕಾರಿಗಳು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…