ಬಿಸಿ ಬಿಸಿ ಸುದ್ದಿ

ರಾವೂರ್ ಜಾತ್ರೆ ಪ್ರಕರಣ: ಪಿಎಸ್ಐ ಪುನಃ ನೇಮಕಕ್ಕೆ ವಿವಿಧ ಸಂಘಟಗಳು ಆಗ್ರಹ

ಕಲಬುರಗಿ: ಲಾಕ್ಡೌನ್ ಉಲ್ಲಂಘಿಸಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದ ರಥೋತ್ಸವ ಹಿನ್ನೆಲೆ ಅಮಾನತುಗೊಂಡಿರುವ ಪಿಎಸ್ಐ ವಿಜಯಕುಮಾರ್ ಬಾವಗಿ ಅವರನ್ನು ಕರ್ತವ್ಯಕ್ಕೆ ಪುನಃ ನೇಮಕ ಮಾಡುವಂತೆ ವಾಡಿ ಪಟ್ಟಣದ ವಿವಿಧ ಸಂಘಟನೆಗಳು ಆಗ್ರಹಿಸಿವೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ, ಮಾದಿಗ ದಂಡೋರ, ಸೇರಿದಂತೆ ಯುವ ಹೋರಾಟಗಾರರು ಪಿಎಸ್ಐ ವಿಜಯಕುಮಾರ್ ಅಮಾನತನ್ನು ಖಂಡಿಸಿದ್ದಾರೆ. ಪಿಎಸ್ಐ ವಿಜಯಕುಮಾರ್ ಜಾತ್ರೋತ್ಸವಕ್ಕೆ ಎರಡು ದಿನಕ್ಕೂ ಮುಂಚಿತವಾಗಿಯೇ ಸಮಿತಿಯೊಂದಿಗೆ ಸಭೆ ನಡೆಸಿ ಜಾತ್ರೆ ನಡೆಸದಂತೆ ತಾಕೀತು ಮಾಡಿದರು.

ಜಾತ್ರೋತ್ಸವ ಸಮಿತಿ ಸದಸ್ಯರು ಕೂಡ ಜಾತ್ರೆ ನಡೆಸುವುದಿಲ್ಲ ಎಂದು ಭರವಸೆ ನೀಡಿದ್ದರು. ಅಲ್ಲದೆ ಸಮಿತಿಯ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ಜಾತ್ರೋತ್ಸವ ರದ್ದುಪಡಿಸುವುದಾಗಿ ಹೇಳಿಕೆಯನ್ನು ಕೊಟ್ಟಿದ್ದರು. ಆದರೆ ಏಕಾಏಕಿ ಯಾರಿಗೂ ಗೊತ್ತಾಗದಂತೆ ಬೆಳ್ಳಗ್ಗೆ ಆರು ಗಂಟೆಗೆ ನೂರಾರು ಸಂಖ್ಯೆಯಲ್ಲಿ ಜನ ಸೇರಿಸಿ ರಥೋತ್ಸವ ಮಾಡುವ ಮೂಲಕ ನಿಷೇದಾಜ್ಞೆಯನ್ನು ಉಲ್ಲಂಘಿಸಿದ್ದಾರೆ.

ಪಿಎಸ್ಐ ವಿಜಯಕುಮಾರ್ ಭಾವಗಿಯವರು ಲಾಕ್ಡೌನ್ ಪ್ರಾರಂಭವಾಗಿದ್ದರಿಂದ ವಾಡಿ ಪೋಲಿಸ ಠಾಣೆ ವ್ಯಾಪ್ತಿಗೆ ಬರುವ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕೋರಾನಾ ವೈರಸ್ ಕುರಿತು ಜಾಗೃತಿ ಮೂಡಿಸುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರು. ರಾವೂರ್ ಘಟನೆಯಲ್ಲಿ ಯಾರೋ ಮಾಡಿದ ತಪ್ಪಿಗೆ ಯಾರು ಶಿಕ್ಷೆ ಅನುಭವಿಸುವಂತಾಗಿದೆ. ಉದ್ದೇಶಪೂರ್ವಕವಾಗಿ ವಿಜಯಕುಮಾರ್ ಭಾವಗಿ ಅವರನ್ನು ಬಲಿಪಶು ಮಾಡಲಾಗಿದೆ.

ಆದರಿಂದ ಎಸ್ ಪಿ ಯಡಾ ಮಾರ್ಟಿನ್ ಅವರು ಪ್ರಕರಣ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಲಾಕ್ ಡೌನ್ ಉಲ್ಲಂಘಗಿಸಿದ ಜಾತ್ರ್ಯೋತ್ಸವ ಸಮಿತಿ ಸದಸ್ಯರನ್ನು ಬಂಧಿಸಿ ಜೈಲಿಗಟ್ಟಬೇಕು, ಯಾವ ತಪ್ಪು ಮಾಡದೆ ಶಿಕ್ಷೆ ಅನುಭವಿಸುತ್ತಿರುವ ಪಿಎಸ್ಐ ವಿಜಯಕುಮಾರ್ ಬಾವಗಿ ಅವರ ಅಮಾನತು ಆದೇಶವನ್ನು ಕೊಡಲೆ ಹಿಂಪಡೆದು ಕರ್ತವ್ಯಕ್ಕೆ ಮರು ಹಾಜರುಪಡಿಸುವಂತೆ ಒತ್ತಾಯಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago