ಬೀದರ್: ನಗರದ ಭೂಮಿ ಯೋಗ ಫೌಂಡೇಶನ್ ಟ್ರಸ್ಟ್ ವತಿಯಿಂದ ಬಸವ ಜಯಂತ್ಯುತ್ಸವ ಅಂಗವಾಗಿ ಜಿಲ್ಲೆಯ, ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಸಾರ್ವಜನಿಕರಿಗಾಗಿ 10 ದಿನಗಳ ಯೋಗಾಸನ ಶಿಕ್ಷಣ ತರಬೇತಿ ಶಿಬಿರ ಯಶಸ್ವಿಯಾಗಿ ಜರುಗಿತೆಂದು ಟ್ರಸ್ಟ್ನ ಸದಸ್ಯ ಸಿದ್ದರಾಮ ಜಿ. ಪಾಟೀಲ್ ತಿಳಿಸಿದರು.
ಈ ಶಿಬಿರದಲ್ಲಿ ಸಾರ್ವಜನಿಕರಿಗಾಗಿ ಸರಳ ಹಾಗೂ ಪ್ರಾರಂಭಿಕ ಆಸನಗಳು, ಪ್ರಾಣಾಯಾಮ, ಹಾಗೂ ಸೂರ್ಯ ನಮಸ್ಕಾರ, ದೈನಂದಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ದೈಹಿಕ ಚಟುವಟಿಕೆಗಳ ಮಹತ್ವದ ಬಗ್ಗೆ ಭೂಮಿಯೋಗ ಫೌಂಡೇಶನ್ ಟ್ರಸ್ಟ್ ಯೋಗ ಶಿಕ್ಷಕ ಸಂತೋಷ ಜಿ. ಶೆಡೋಲ್ಕರವರಿಂದ ತರಬೇತಿ ನೀಡಲಾಯಿತು ಎಂದು ಹೇಳಿದರು.
ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದಸಂತೋಷ ಜಿ. ಶೆಡೋಲ್ಕರವರು ಯೋಗವು ರೋಗ ನಿರೋಧಕ ಶಕ್ತಿಯಾಗಿ ನಮ್ಮನ್ನು ಖಾಯಿಲೆಗಳಿಂದ ರಕ್ಷಿಸುವಲ್ಲಿ ತನ್ನ ಮಹತ್ವವಾದ ಪಾತ್ರವನ್ನು ಹೊಂದಿದೆ. ಆದ್ದರಿಂದ ಪ್ರತಿಯೊಬ್ಬರು ತಪ್ಪದೆ ಯೋಗಾಸನ ಅಭ್ಯಾಸ ರೂಢಿಸಿ ಕೊಂಡರೆ ಖಾಯಿಲೆಯಿಂದ ಮುಕ್ತಿ ಪಡೆದು ನೆಮ್ಮದಿಯಿಂದ ಬದುಕ ಬಹುದು ಎಂದು ಸಲಹೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು, ಗ್ರಾಮಸ್ಥರು ಹಾಗೂ ಇನ್ನಿತರರು ಭಾಗವಹಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…