ಬಿಸಿ ಬಿಸಿ ಸುದ್ದಿ

ಅಂಬೇಡ್ಕರ್ ಜಯಂತಿಯಲ್ಲಿ ಸೇರಿಲಿದ್ದಾರೆ ಹತ್ತು ಸಾವಿರ ಜನ: ಹೊಸಮನಿ

ಸುರಪುರ: ಇದೇ ತಿಂಗಳ ಇಪ್ಪತ್ತನೆ ತಾರೀಖಿನಂದು ನಗರದಲ್ಲಿ ನಡೆಯಲಿರುವ ಡಾ:ಬಾಬಾ ಸಾಹೇಬ ಅಂಬೇಡ್ಕರರ ೧೨೮ನೇ ಜಯಂತಿ ಕಾರ್ಯಕ್ರಮದಲ್ಲಿ ಸುಮಾರು ಹತ್ತು ಸಾವಿರ ಜನ ಸೇರುವ ನಿರೀಕ್ಷೆಯಿದೆ ಎಂದು ಡಾ:ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ವೆಂಕಟೇಶ ಹೊಸಮನಿ ಮಾತನಾಡಿದರು.

ನಗರದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಹಾಲ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮದ ಸಿಧ್ಧತೆ ಈಗಾಗಲೆ ಪೂರ್ಣಗೊಂಡಿದ್ದು ತಾಲ್ಲೂಕಿನ ಪ್ರತಿ ಗ್ರಾಮಗಳಿಂದಲೂ ಬುಧ್ದ ಬಸವ ಅಂಬೇಡ್ಕರರ ಅನುಯಾಯಿಗಳು ಭಾಗವಹಿಸಲಿದ್ದಾರೆ, ಅಲ್ಲದೆ ಕಾರ್ಯಕ್ರಮದಲ್ಲಿ ವರಜ್ಯೋತಿ ಭಂತೇಜಿ ಬುಧ್ದ ವಿಹಾರ ಅಣದೂರು ಹಾಗು ಮಹಾರಾಷ್ಟ್ರದ ಉಸ್ತುರಿ ಮಠದ ಕೊರಣೇಶ್ವರಿ ಸ್ವಾಮೀಜಿ ಅನುಭಾವ ನೀಡಲಿದ್ದಾರೆ ಮತ್ತು ಉಪನ್ಯಾಸಕರಾಗಿ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಕೆ.ನೀಲಾ ಅವರು ಭಾಗವಹಿಸಲಿದ್ದು ಇವರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜಯಂತ್ಯೋತ್ಸವದ ವೇದಿಕೆ ಸಮಿತಿ ಅಧ್ಯಕ್ಷ ಆದಪ್ಪ ಹೊಸಮನಿ ಮಾತನಾಡಿ,ಮದ್ಹ್ಯಾನ ಎರಡು ಗಂಟೆಗೆ ಬುಧ್ದ ವಿಹಾರದಿಂದ ಬುಧ್ದ ಬಸವ ಅಂಬೇಡ್ಕರರ ಮೆರವಣಿಗೆ ನಡೆಯಲಿದ್ದು,ಸಂಜೆ ಬಸ್ ನಿಲ್ದಾಣದ ಬಳಿಯ ಅಂಬೇಡ್ಕರ ವೃತ್ತದಲ್ಲಿ ನಡೆಯುವ ಸಮಾವೇಶದಲ್ಲಿ ಬೆಂಗಳೂರಿನ ಭೂಮಿತಾಯಿ ಬಳಗ ಕಲಾ ಮಂಡಳಿಯ ನಿರ್ಮಲಾ ಮತ್ತು ಸಂಗಡಿಗರಿಂದ ಸಾಂಸ್ಕೃತಿ ಕಾರ್ಯಕ್ರಮ ಜರುಗಲಿವೆ ಎಂದರು.

ಹಣಕಾಸು ಸಮಿತಿ ಅಧ್ಯಕ್ಷ ರಾಹುಲ್ ಹುಲಿಮನಿ ಮಾತನಾಡಿ,ಬುಧ್ದ ಬಸವ ಅಂಬೇಡ್ಕರರ ಸ್ಮರಣೆಯ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ ಸುರೇಶ ಅಂಕಲಗಿ ಉದ್ಘಾಟಿಸಲಿದ್ದಾರೆ ಹಾಗು ಅನೇಕ ಜನ ಅಧಿಕಾರಿಗಳು ಮತ್ತು ಗಣ್ಯರು ಭಾಗವಹಿಸಲಿದ್ದು ಬಾಬಾ ಸಾಹೇಬರ ಅಭಿಮಾನಿ ನೂರಾರು ಯುವಕರು ಮತ್ತು ಮಹಿಳೆಯರು ವಿಶೇಷವಾದ ಸಮವಸ್ತ್ರಗಳ ಧರಿಸಿ ಕಾರ್ಯಮದ ಮೆರಗು ಹೆಚ್ಚಿಸಲಿದ್ದಾರೆ.ಆದ್ದರಿಂದ ಅಭೂತಪೂರ್ವವಾದ ಕಾರ್ಯಕ್ರಮದಲ್ಲಿ ಬುಧ್ದ ಬಸವ ಮತ್ತು ಅಂಬೇಡ್ಕರರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ವಿವಿದ ಸಮಿತಿಗಳ ಪದಾಧಿಕಾರಿಗಳಾದ ನಾಗಣ್ಣ ಕಲ್ಲದೇವನಹಳ್ಳಿ,ಭೀಮರಾಯ ಸಿಂಧಗೇರಿ ಮಾತನಾಡಿದರು ಹಾಗು ರಮೇಶ ಅರಕೇರಿ,ಮಾಳಪ್ಪ ಕಿರದಹಳ್ಳಿ,ಧರ್ಮರಾಜ ಬಡಿಗೇರ,ರಾಜು ಕಟ್ಟಿಮನಿ,ಚಂದಪ್ಪ ಪಂಚಮ್,ಶೇಖರ ಜೀವಣಗಿ,ಶಂಕರ ಬೊಮ್ಮನಹಳ್ಳಿ,ಮಲ್ಲಿಕಾರ್ಜುನ ಜಾಲಿಬೆಂಚಿ,ಮಲ್ಲಪ್ಪ ನಾಯ್ಕೋಡಿ ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420