ಸುರಪುರ: ನಗರದ ತಿಮ್ಮಾಪುರದ ಚೌಡೇಶ್ವರಿ ದೇವಸ್ಥಾನ ಆವರಣದಲ್ಲಿ ತಾಲ್ಲೂಕು ನೇಕಾರರ ಸೌಹಾರ್ಧ ಸಹಕಾರಿ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮ ಜರುಗಿತು.ಕಾಅರ್ಯಕ್ರಮದ ಆರಂಭದಲ್ಲಿ ಮಹಾಲಕ್ಷ್ಮೀ ಮತ್ತು ಸರಸ್ವತಿ ಪೂಜೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಹಕಾರಿ ಸೌಹಾರ್ಧದ ಉದ್ಘಾಟಕರಾಗಿ ಆಗಮಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ ನಾಮಫಲಕ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ,ಸಹಕಾರಿ ಸಂಘದಿಂದ ಬಡ ನೇಕಾರರಿಗೆ ಅನುಕೂಲವಾಗಲಿದೆ.ನೇಕಾರರು ಸಾಲ ಪಡೆದು ನೇಕಾರಿಕೆಯನ್ನು ಅಭೀವೃಧ್ಧಿ ಪಡಿಸುವ ಜೊತೆಗೆ ಬ್ಯಾಂಕಿನ ಅಭೀವೃಧ್ದಿಗೆ ಸಹಕರಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ವೀರಸಂಗಪ್ಪ ಹಾವೇರಿ ಮಾತನಾಡಿ,ಎಲ್ಲರು ಬ್ಯಾಂಕಿನ ನಿಯಮದಂತೆ ನಡೆದುಕೊಂಡರೆ ನಮ್ಮ ಅಭೀವೃಧ್ಧಿ ಜೊತೆಗೆ ಬ್ಯಾಂಕಿನ ಏಳಿಗೆ ಸಾಧ್ಯವಿದೆ.ಆದ್ದರಿಂದ ಎಲ್ಲರು ಸಾಲ ಪಡೆದು ಸರಿಯಾದ ಸಮಯಕ್ಕೆ ಮರಳಿಸುವ ಮೂಲಕ ಬ್ಯಾಂಕು ಹೆಚ್ಚಿನ ಮಟ್ಟದಲ್ಲಿ ಬೆಳೆಯಲು ಸಹಕಾರ ನೀಡುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಶಿವಶಂಕರ ಶಾಬಾದಿ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಚೆನ್ನಮಲ್ಲಿಕಾರ್ಜುನ ಗುಂಡಾನೋರ, ಹಣಮೇಶಗೌಡ, ಮಲ್ಲಿಕಾರ್ಜುನ ಚೆಟ್ಟಿ,ಬಸವರಾಜ ಮಂಟೆ, ಹಣಮಮ್ಮ ಕೆಂಡದ, ಚೆನ್ನಪ್ಪ ಕಡದರಾಳ, ಬಸಪ್ಪ ಗಿಡ್ರೆ, ಬಸವರಾಜ ಗೊನಟ, ಸಂಗಣ್ಣ ಪೂಜಾರಿ, ಬಸವರಾಜ ಪೂಜಾರಿ,ಕುಮಾರಸ್ವಾಮಿ ಗುಡ್ಡಡಗಿ, ಲಿಂಗಣ್ಣ ರಾಯಚೂರಕರ್, ಶ್ರೀನಿವಾಸ ಪಾಣಿಭಾತೆ, ಶ್ರೀನಿವಾಸ ಬಲಪೂರ, ಮಲ್ಲಿಕಾರ್ಜುನ ರಾವುತ್ ಇದ್ದರು. ಕೋರಿಸಂಗಮ್ಮ ಗಡ್ಡದ ಪ್ರಸ್ತಾವಿಕವಾಗಿ ಮಾತನಾಡಿದರು, ಸಂಗಪ್ಪ ಸಿರೆಗೋಳ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…