ಶಹಾಪುರ: ಭಾಷಣ ಸಾಕು ನಿರುದ್ಯೋಗಿ ಭತ್ಯೆ ಬೇಕು ಎಂಬ ಘೋಷ ವಾಕ್ಯದಲ್ಲಿ ರಾಜ್ಯದಲ್ಲಿ ಇರುವ ಎಲ್ಲ ನಿರುದ್ಯೋಗಿಗಳಿಗೆ ನಿರುದ್ಯೋಗಿ ಭತ್ತ ನೀಡಿ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ಸ್ನಾತಕೋತ್ತರ ಪದವೀಧರ ಸೂಫಿ ಸಾಬ್ ಕನ್ಯಾಕೋಳೂರು ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಆಗ್ರಹಿಸಿದರು.
ಭಾರತದಾದ್ಯಂತ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಇಂದು ತಮ್ಮ ಸ್ವಂತ ಮನೆಯ ಮುಂದೆ ಭಾಷಣ ಸಾಕು ನಿರುದ್ಯೋಗ ಭತ್ಯೆ ಬೇಕು ಎಂದು ವಿಶೇಷವಾಗಿ ಪ್ರತಿಭಟನೆ ಮಾಡಿದರು. ನಾನು ಎಂ.ಎ ಎಂ.ಫಿಲ್ ಪದವೀಧರ ನಮ್ಮಂಥ ಅದೆಷ್ಟು ನಿರುದ್ಯೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಸರಕಾರ ನಮ್ಮಂತಹ ಪ್ರತಿಭಾವಂತ ನಿರುದ್ಯೋಗಿಗಳಿಗೆ ಆಸರೆಯಾಗಬೇಕೆಂದು ಈ ಮೂಲಕ ರಾಜ್ಯ ಸರಕಾರಕ್ಕೆ ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚೆಚ್ಚು ಸೃಷ್ಟಿಸುವ ಗಂಭೀರವಾದ ಚಿಂತನೆ ಮಾಡುತ್ತಿಲ್ಲ ದೇಶದ ಜ್ವಲಂತ ಸಮಸ್ಯೆಗಳು ಬಗೆಹರಿಸುವುದನ್ನು ಬಿಟ್ಟು ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವ ಕುತಂತ್ರ ನಡೆಯುತ್ತಿದೆ ಕೋಮು ವಿಷ ಬೀಜ ಬಿತ್ತಲಾಗುತ್ತಿದೆ ಇದು ದೇಶದ ಒಳ್ಳೆಯ ಬೆಳವಣಿಗೆ ಅಲ್ಲವೇ ಅಲ್ಲ ಎಂದು ತುಂಬಾ ನೋವಿನಿಂದ ಹೇಳಿದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…