ವಾಡಿ: ಪಟ್ಟಣದ ಪಿಲಕಮ್ಮಾ ದೇವಿ ಬಡಾವಣೆಯ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೀಲ್ಡೌನ್ ತೆಕ್ಕೆಗೆ ಜಾರಿದ ನಾಲ್ಕು ರೆಡ್ ಜೋನ್ ಬಡಾವಣೆಗಳ ಅತ್ಯಂತ ಬಡ ಕುಟುಂಬಗಳಿಗೆ ಅಜೀಂ ಪ್ರೇಮಜೀ ಫೌಂಡೇಷನ್ ಬೆಂಗಳೂರು ಇವರ ವತಿಯಿಂದ 10 ಕೆಜಿ ಅಕ್ಕಿ, ಗೋದಿ ಹಿಟ್ಟು 2.5 ಕೆಜಿ, ತೊಗರಿ ಬೇಳೆ 1 ಕೆಜಿ, ಎಣ್ಣೆ, ಉಪ್ಪು, ಈರುಳ್ಳಿ, ಆಲುಗಡ್ಡೆ, ಖಾರದ ಪುಡಿ, ಸಾಬೂನು, ಟೂತ್ ಪೇಸ್ಟ್ ಸೇರಿದಂತೆ ಇತರ ದಿನಸಿಯುಳ್ಳ ಒಟ್ಟು 300 ಆಹಾರ ಕಿಟ್ ವಿತರಿಸಲಾಯಿತು.
ಮಂಗಳವಾರ ಸೀಲ್ಡೌನ್ ಬಡಾವಣೆಗಳಿಗೆ ಭೇಟಿ ನೀಡಿದ ನಾಲವಾರ ಉಪ ತಹಶೀಲ್ದಾರ ವೆಂಕನಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಮೈನಾಬಾಯಿ ರಾಠೋಡ ಹಾಗೂ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ಅವರು ಮೊದಲೇ ಗುರುತಿಸಿ ಪಟ್ಟಿ ಮಾಡಲಾಗಿದ್ದ ಪಡಿತರ ಚೀಟಿ ವಂಚಿತ ಬಡ ಕುಟುಂಬಗಳಿಗೆ ಮತ್ತು ಗುಡಿಸಲುವಾಸಿ ಬಡಜನರಿಗೆ ಅಜೀಂ ಪ್ರೇಮಜೀ ಫೌಂಡೇಷನ್ ಒದಗಿಸಿದ ಆಹಾರ ದಾಸ್ತಾನು ವಿತರಿಸಿದರು. ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ, ಈಡಿಗ ಸಮಾಜದ ಅಧ್ಯಕ್ಷ ಸುನೀಲ ಗುತ್ತೇದಾರ, ಈಶ್ವರ ಅಂಬೇಕರ್, ರಾಹುಲ ಹುಗ್ಗಿ, ವಿಜಯಕುಮಾರ ಮಂಗಳೂರ ಮತ್ತಿತರರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…