ಆಳಂದ: ಪಟ್ಟಣದ ಒಬ್ಬ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡು ಸೋಂಕು ಹರಡುವುದನ್ನು ತಡೆಯಲು ಮುಂದಾಗಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಾಲೂಕಾ ಆಡಳಿತಕ್ಕೆ ಸೂಚಿಸಿದರು.
ಬುಧುವಾರ ತಹಸೀಲ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೋಂಕು ಪತ್ತೆಯಾಗುರುವ ಪ್ರದೇಶದಲ್ಲಿ ೧ ಕೀ.ಮೀ ಅಂತರದಲ್ಲಿ ಸಿಲ್ಡೌನ್ ಮಾಡಬೇಕು ಜೊತೆಗೆ ಅದರ ಹಿಂದಿನ ೧ ಕೀ.ಮೀ ವ್ಯಾಪ್ತಿಯಲ್ಲಿ ಬಫರ್ಜೋನ್ ಅಳವಡಿಸಿಕೊಳ್ಳಲು ಹೇಳಿದರು.
ಸೋಂಕು ಪತ್ತೆಯಾಗಿರುವ ವ್ಯಕ್ತಿಯು ವಾಸವಾಗಿದ್ದ ಇಡೀ ಪ್ರದೇಶದ ಜನರನ್ನು ತಪಾಸಣೆಗೆ ಒಳಪಡಿಸಿ, ಸ್ಕ್ರೀನಿಂಗ್ ಮಾಡಬೇಕು ಹಾಗೂ ಆ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಸ್ಥಳಗಳಲ್ಲಿ ಪುರಸಭೆ ವತಿಯಿಂದ ನಿಷೇಧಿತ ಪ್ರದೇಶವೆಂದು ಫ್ಲೆಕ್ಸ್ ಹಾಕಲು ಆದೇಶಿಸಿದರು.
ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು ವಿನಾಕಾರಣ ಓಡಾಟ ಮಾಡಿದರೇ ಅವರ ಮೇಲೆ ಕಾನೂನಿನ ಪ್ರಕಾರ ಉಗ್ರ ಕ್ರಮಕೈಗೊಳ್ಳಲಾಗುವುದು. ದಿನನಿತ್ಯದ ಉಪಜೀವನಕ್ಕೆ ಬೇಕಾಗುವ ದಿನಸಿ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಯವರು ಕಡ್ಡಾಯವಾಗಿ ಸ್ಯಾನಿಟೈಜರ್ ಬಳಸಿ, ಮಾಸ್ಕ್ ಗ್ಲೌಸ್ ಧರಿಸಿಕೊಂಡು ನಿಗದಿತ ಸಮಯಕ್ಕೆ ವ್ಯಾಪಾರ ಮಾಡಬೇಕು ಗ್ರಾಹಕರು ಕೂಡಾ ಮಾಸ್ಕ್ ಧರಿಸಿಕೊಂಡೇ ಪದಾರ್ಥಗಳನ್ನು ಖರೀದಿಸಬೇಕು.
ತರಕಾರಿ ಮತ್ತು ಹಣ್ಣು ಹಂಪಲುಗಳನ್ನು ಮಾರುವವರು ಅದೇ ಪ್ರದೇಶದ ನಿವಾಸಿಗಳಾಗಿದ್ದು ತಳ್ಳು ಗಾಡಿಯಲ್ಲಿ ಮಾತ್ರ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾರಾಟ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ತಹಸೀಲ್ದಾರ ದಯಾನಂದ ಪಾಟೀಲ, ಇಒ ಸಂಜಯರೆಡ್ಡಿ, ಸಿಪಿಆಯ್ ಶಿವಾನಂದ ಗಾಣಿಗೇರ್, ಜೆಸ್ಕಾಂ ಎಇಇ, ಪುರಸಭೆ ಮುಖ್ಯಾಧಿಕಾರಿ, ಶೀರಸ್ತೆದಾರ, ಉಪ ತಹಸೀಲ್ದಾರರು ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…