ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

0
126

ಕಲಬುರಗಿ: ಕೊರೋನಾ ವೈರಸ್ (ಕೊವೀಡ್-19) ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ರಾಜ್ಯ ಸರ್ಕಾರವು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಪ್ರಕಾರದ ಕಲಾವಿದರುಗಳು, ಸಾಹಿತಿಗಳಿಗೆ 2000 ರೂ. ಗಳ ಆರ್ಥಿಕ ನೆರವು ನೀಡಲು ಯೋಜನೆ ರೂಪಿಸಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಕಲಾವಿದರು, ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಆರ್ಥಿಕ ನೆರವು ಪಡೆಯಲಿಚ್ಛಿಸುವ ಕಲಾವಿದರು, ಸಾಹಿತಿಗಳು 10 ವರ್ಷ ಕಲಾ ಸೇವೆ ಸಲ್ಲಿಸಿರಬೇಕು. ವೃತ್ತಿ ನಿರತ ಕಲಾವಿದರಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರಬೇಕು. ಕಲಾವಿದರು, ಸಾಹಿತಿಗಳು ತಮ್ಮ ಹೆಸರು, ವಿಳಾಸ, ಆಧಾರ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ (ಪಾಸ್‍ಬುಕ್ ಜಿರಾಕ್ಸ್ ಪ್ರತಿ), ಐ.ಎಫ್.ಎಸ್.ಸಿ. (IಈSಅ) ಸಂಖ್ಯೆ, ದೂರವಾಣಿ ಸಂಖ್ಯೆ ವಿವರದೊಂದಿಗೆ ಬಿಳಿ ಹಾಳೆಯಲ್ಲಿ ಸ್ಪಷ್ಟವಾಗಿ ಕಾಣುವಂತೆ ಬರೆದ ಅರ್ಜಿಯನ್ನು 2020ರ ಏಪ್ರಿಲ್ 27 ರೊಳಗಾಗಿ ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯ ಇ-ಮೇಲ್ ವಿಳಾಸ kannadaculture.glb@gmail.com ಕ್ಕೆ ಹಾಗೂ ವಾಟ್ಸ್ ಆ್ಯಪ್ ಸಂಖ್ಯೆ 9036531107 ಗೆ ಕಳುಹಿಸಬಹುದಾಗಿದೆ.

Contact Your\'s Advertisement; 9902492681

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಾಸಾಶನ ಪಡೆಯುತ್ತಿರುವವರು ಹಾಗೂ ಸರ್ಕಾರಿ ನೌಕರರು (ರಾಜ್ಯ, ಕೇಂದ್ರ, ನಿಗಮ ಮಂಡಳಿ, ಸರ್ಕಾರದ ಅನುದಾನಿತ ಸಂಸ್ಥೆಗಳು, ಅರೆಸರ್ಕಾರಿ ಸಂಸ್ಥೆಗಳ) ಕಲಾವಿದರು, ಸಾಹಿತಿಗಳು ಇದಕ್ಕೆ ಅರ್ಹರಾಗಿರುವುದಿಲ್ಲ. ತಪ್ಪು ಮಾಹಿತಿ ನೀಡಿ ಲಾಭ ಪಡೆಯುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮದ ಕಾನೂನಿನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here